25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಜೈನ ಧರ್ಮಕ್ಕೆ ಮತ್ತು ಜೈನ ಧರ್ಮೀಯರ ಭಾವನೆಗಳಿಗೆ ಅವಮಾನ ದೂರು : ಗಿರೀಶ್ ಮಟ್ಟಣ್ಣನವರ್ ಹಾಗೂ ಕುಡ್ಲ ರಾಂಪೇಜ್ ಮಾಲೀಕರು ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ: ಜೈನ ಧರ್ಮಕ್ಕೆ ಮತ್ತು ಜೈನ ಧರ್ಮೀಯರ ಭಾವನೆಗಳಿಗೆ ಅವಮಾನ ಪಡಿಸಲಾಗಿದೆ ಎಂಬ ದೂರಿನಂತೆ ಗಿರೀಶ್ ಮಟ್ಟಣ್ಣನವರ್ ಹಾಗೂ ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನೆಲ್ ಮೇಲೆ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಗಿರೀಶ ಮಟ್ಟಣ್ಣವರ್‌ ಇವರು ಜೈನ ಧರ್ಮಕ್ಕೆ ಮತ್ತು ಜೈನ ಧರ್ಮೀಯರ ಭಾವನೆಗಳಿಗೆ ಅವಮಾನಪಡಿಸುವ ಉದ್ದೇಶದಿಂದ ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನೆಲ್ ಸಂದರ್ಶನದಲ್ಲಿ ಜೈನ ಧರ್ಮಕ್ಕೆ ಅಪಮಾನವಾಗುವ ರೀತಿಯಲ್ಲಿ ಸಂದರ್ಶನ ನೀಡಿದ್ದು, ಅಲ್ಲದೇ ಕುಡ್ಲ ರಾಂಪೇಜ್ ಚಾನೆಲ್ ಮಾಲೀಕರು ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಆಪಾಧಿತರಿಬ್ಬರೂ ಜೈನ ಧರ್ಮೀಯರ ಧಾರ್ಮೀಕ ಭಾವನೆಗಳಿಗೆ ಅಪಮಾನಪಡಿ
ಸಿದಾರೆಂದು ಅಜಿತ್ ನಾಗಪ್ಪ ಬಸಾಪುರ್ ಹುಬ್ಬಳ್ಳಿ ರವರು ನೀಡಿದ ದೂರಿನಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ನೀಡಿದ ದೂರನ್ನು ಸರಹದ್ದಿನ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಕಳುಹಿಸಿಕೊಟ್ಟಿದ್ದನ್ನು ಮತ್ತು ಮಂಜುನಾಥ ಜಕ್ಕಣ್ಣವರ ಧಾರವಾಡ ರವರು ಧಾರವಾಡ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ನೀಡಿದ ದೂರಿನ ಘಟನೆಯು ಒಂದೇ ಆಗಿರುತ್ತದೆ, ಈ ಬಗ್ಗೆ ದೂರುದಾರರು ನೀಡಿದ ಹೇಳಿಕೆಯನ್ನು ದಾಖಾಲಿಸಿಕೊಂಡು ಆ 12 ರಂದು ಬೆಳ್ತಂಗಡಿ ಠಾಣಾ ಅಕ್ರ: 86/2025 ಕಲಂ.196(1) (ಎ) 299 ಬಿ.ಎನ್.ಎಸ್. 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಬೆಳ್ತಂಗಡಿ: ವಾಗ್ವಾದವನ್ನು ನೆಪವಾಗಿಸಿ ಕತ್ತಿಯಿಂದ ಕಡಿದು ಕೊಲೆಗೆ ಯತ್ನ: ಆರೋಪಿಯ ಬಂಧನ

Suddi Udaya

ಉಜಿರೆಯಲ್ಲಿ ಕುಶಾಲನಗರದ ವ್ಯಕ್ತಿಯ ಶವ ಪತ್ತೆ

Suddi Udaya

ಅಪ್ರಾಪ್ತ ಬಾಲಕನ ಅಪಹರಿಸಿ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರ ಮೇಲೆ ಹಲ್ಲೆ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya
error: Content is protected !!