September 6, 2026
Uncategorized

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ಅನಧಿಕೃತವಾಗಿ ದೇವಾಲಯದ ಮಾಹಿತಿ ಪ್ರಕಟಿಸಿ ಭಕ್ತಾದಿಗಳಿಂದ ಸೇವಾ ಶುಲ್ಕ ವಸೂಲು
ಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್‌ ಅವರು ಮಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದು, ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೆ ಒಳಪಡುವ ದೇವಸ್ಥಾನದ ಮಾಹಿತಿಯನ್ನು ಇನ್‌ಸ್ಟಾ ಗ್ರಾಮ್ ಪೇಜ್‌ ನಲ್ಲಿ ಅನಧಿಕೃತವಾಗಿ ಬಳಸಿಕೊಂಡು ಭಕ್ತಾದಿಗಳನ್ನು ದಾರಿ ತಪ್ಪಿಸಿ ದುರುಪಯೋಗಪಡಿಸಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಇನ್‌ಸ್ಟಾ ಗ್ರಾಮ್ ಪೇಜ್‌ ನಲ್ಲಿ ಭಕ್ತರು ದೇವಸ್ಥಾನದ ಸೇವೆಗಾಗಿ ಆನ್‌ ಲೈನ್‌ ಮೂಲಕ ₹150 ಪಾವತಿ ಸಬೇಕೆಂದು ತಿಳಿಸಿ ಮೋಸ ಮಾಡಲಾಗುತ್ತಿತ್ತು.
ಘಟನೆ ಬೆಳಕಿಗೆ :
ಆಗಸ್ಟ್ 26 ರಂದು ಭಕ್ತರಿಂದ 150‌ ರೂ. ಸಂಗ್ರಹಿಸಿದ ಅಪಾದಿತರು ಸೌತಡ್ಕ ದೇವಸ್ಥಾನಕ್ಕೆ ಬಂದು, ದೇವಸ್ಥಾನದಲ್ಲಿ ಯಾವುದೇ ಸೇವಾ ರಶೀದಿ ಮಾಡದೆ ಅರ್ಚಕರ ಮೂಲಕ ದೇವರಿಗೆ ಅರ್ಚನೆ ಮಾಡಿಸಿ ಅದರ ವಿಡಿಯೋವನ್ನು ತೆಗೆಯುತ್ತಿದ್ದ ವೇಳೆ ಈ ಘಟನೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಗಮನಕ್ಕೆ ಬಂತು.
ತಕ್ಷಣ ಸಮಿತಿಯವರು ವಿಷಯವನ್ನು ಪರಿಶೀಲಿಸಿ ನಾಲ್ವರು ಅಪಾದಿತರನ್ನು ಸ್ಥಳದಲ್ಲೇ ಹಿಡಿದು ಧರ್ಮಸ್ಥಳ ಪೊಲೀಸ್‌ ಠಾಣೆಯ ವಶಕ್ಕೆ ಒಪ್ಪಿಸಿದ್ದಾರೆ.

ಈ ಪ್ರಕರಣದ ಹಿನ್ನೆಲೆಯಲ್ಲಿ, ದೇವಸ್ಥಾನದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಭಕ್ತರನ್ನು ಮೋಸ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ದೇವಸ್ಥಾನ ಸಮಿತಿ ಹಾಗೂ ಆಡಳಿತ ಮಂಡಳಿ ಕಠಿಣ ನಿಲುವು ಕೈಗೊಂಡಿದೆ.

Related posts

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ವತಿಯಿಂದ ಅರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ರಕ್ಷಾಬಂಧನ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ನಾಲ್ಕೂರು: ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಕಾಳಜಿಯ ಯಶಸ್ವೀ ಪ್ರಯೋಗಗಳು

Suddi Udaya

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

Suddi Udaya
error: Content is protected !!