July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಪಪೂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂವಾದ

ಉಜಿರೆ: ವಿದ್ಯಾರ್ಥಿಗಳು ಮೊದಲು ತಮ್ಮ ಮಾರ್ಗವನ್ನು ತಿಳಿಯಬೇಕು. ತಮಗೆ ಇಷ್ಟವಾದ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಆಗ ನಾವು ಜೀವನದಲ್ಲಿ ಸಾರ್ಥಕತೆ ಕಾಣಬಹುದು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಅಮೃತ್ ಹಾಗೂ ಪರೀಕ್ಷಿತ್ ಗೋಖಲೆ ಹೇಳಿದರು.

ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಆಯೋಜಿಸಿದ ಹಿರಿಯ ವಿದ್ಯಾರ್ಥಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ದ್ವಿತೀಯ ವಿಜ್ಞಾನದ ತರಗತಿಯಲ್ಲಿ ಅಮೃತ್ ಅವರು ಮೂಲ ವಿಜ್ಞಾನದ ವಿವಿಧ ಅವಕಾಶಗಳ ಬಗ್ಗೆ ಮಾತನಾಡಿದರು.
ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಪ್ರಧಾನ ಸಂಯೋಜಕಿ ಅಂಜನಾ ಸ್ವಾಗತಿಸಿ , ಸಂಸ್ಕೃತ ಸಂಘದ ಉಪಾಧ್ಯಕ್ಷ ಯಶಸ್ವಿ ವಂದಿಸಿದರು . ಪ್ರಧಾನ ಕಾರ್ಯದರ್ಶಿ ಪ್ರಸನ್ನಾ ನಿರೂಪಿಸಿದರು.

ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ಕಲಾ ತರಗತಿಯಲ್ಲಿ ಪರೀಕ್ಷಿತ್ ಗೋಖಲೆ ಅವರು ವಾಣಿಜ್ಯಶಾಸ್ತ್ರದ ವಿವಿಧ ಅವಕಾಶಗಳ ಬಗ್ಗೆ ಮಾತನಾಡಿದರು.
ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಹ ಸಂಯೋಜಕಿ ಶ್ರೀಪೂರ್ಣಾ ನಿರೂಪಿಸಿದರು. ಧರೆಶ್ ಸ್ವಾಗತಿಸಿ , ಸಿರಿ .ಜಿ. ಗೌಡ ವಂದಿಸಿದರು .

Related posts

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

Suddi Udaya

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕನ್ಯಾಡಿ 1 ಸ.ಹಿ.ಪ್ರಾ. ಶಾಲೆಯಲ್ಲಿ ನಲಿಕಲಿ ಕೊಠಡಿಯ ಉದ್ಘಾಟನೆ

Suddi Udaya

ಎಸ್.ಡಿ.ಎಂ ಕಾಲೇಜಿನ ಮಾಲಿನಿ ಅಂಚನ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya
error: Content is protected !!