23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಪಪೂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂವಾದ

ಉಜಿರೆ: ವಿದ್ಯಾರ್ಥಿಗಳು ಮೊದಲು ತಮ್ಮ ಮಾರ್ಗವನ್ನು ತಿಳಿಯಬೇಕು. ತಮಗೆ ಇಷ್ಟವಾದ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಆಗ ನಾವು ಜೀವನದಲ್ಲಿ ಸಾರ್ಥಕತೆ ಕಾಣಬಹುದು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಅಮೃತ್ ಹಾಗೂ ಪರೀಕ್ಷಿತ್ ಗೋಖಲೆ ಹೇಳಿದರು.

ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಆಯೋಜಿಸಿದ ಹಿರಿಯ ವಿದ್ಯಾರ್ಥಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ದ್ವಿತೀಯ ವಿಜ್ಞಾನದ ತರಗತಿಯಲ್ಲಿ ಅಮೃತ್ ಅವರು ಮೂಲ ವಿಜ್ಞಾನದ ವಿವಿಧ ಅವಕಾಶಗಳ ಬಗ್ಗೆ ಮಾತನಾಡಿದರು.
ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಪ್ರಧಾನ ಸಂಯೋಜಕಿ ಅಂಜನಾ ಸ್ವಾಗತಿಸಿ , ಸಂಸ್ಕೃತ ಸಂಘದ ಉಪಾಧ್ಯಕ್ಷ ಯಶಸ್ವಿ ವಂದಿಸಿದರು . ಪ್ರಧಾನ ಕಾರ್ಯದರ್ಶಿ ಪ್ರಸನ್ನಾ ನಿರೂಪಿಸಿದರು.

ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ಕಲಾ ತರಗತಿಯಲ್ಲಿ ಪರೀಕ್ಷಿತ್ ಗೋಖಲೆ ಅವರು ವಾಣಿಜ್ಯಶಾಸ್ತ್ರದ ವಿವಿಧ ಅವಕಾಶಗಳ ಬಗ್ಗೆ ಮಾತನಾಡಿದರು.
ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಹ ಸಂಯೋಜಕಿ ಶ್ರೀಪೂರ್ಣಾ ನಿರೂಪಿಸಿದರು. ಧರೆಶ್ ಸ್ವಾಗತಿಸಿ , ಸಿರಿ .ಜಿ. ಗೌಡ ವಂದಿಸಿದರು .

Related posts

ದ.ಕ. ಫ್ಲವರ್ ಡೆಕೊರೇಷನ್ ಮಾಲಕರ ಸಂಘ: ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ಸೀತಾರಾಮ್ ಆರ್. ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಕ್ರಮ್ ಗೌಡ ಧರ್ಮಸ್ಥಳ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

Suddi Udaya

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಪಂಚ ಗ್ಯಾರಂಟಿ: ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ ಜನಸ್ಪಂದನ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುದಾನದ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ

Suddi Udaya
error: Content is protected !!