23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ತರಬೇತಿ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ ಹಾಗೂ ಮನ್ನಣೆಗಳು

ಬೆಳ್ತಂಗಡಿ: ಜೆಸಿಐ ವಲಯ 15 ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ತರಬೇತಿ ಸಮ್ಮೇಳನವು ಕಾರ್ಕಳದ ಬಾಲಜಿ ಹೊಟೇಲ್ ಸಭಾಂಗಣದಲ್ಲಿ ನಡೆಯಿತು.

ಜೆಸಿಐ ಬೆಳ್ತಂಗಡಿಯ ಸದಸ್ಯತ್ವ ಬೆಳವಣಿಗೆ ಹೊಸ ಜೆಸಿಐ ಘಟಕದ ಕೊಡುಗೆ ಹಾಗೂ ಜೆಸಿಐ ಭಾರತದ ವಿದ್ಯಾರ್ಥಿ ವೇತನ ನೀಡುವ ಫೌಂಡೇಶನ್ ಗೆ ನೀಡಿದ ದೇಣಿಗೆಗಳನ್ನು ಪರಿಗಣಿಸಿ ಅತ್ಯುತ್ತಮ 10 ಘಟಕದಲ್ಲಿ ಟಾಪ್ 6 ಪ್ರಶಸ್ತಿ ಪಡೆಯಿತು.

ಅದೇ ರೀತಿ ತರಬೇತಿ ವಿಭಾಗದಲ್ಲಿ ತಾಲೂಕಿನ ಸಂಘ ಸಂಸ್ಥೆಗಳು, ಶಾಲಾ-ಕಾಲೇಜುಗಳು ಹಾಗೂ ಜೇಸಿ ಸದಸ್ಯರಿಗಾಗಿ ನಡೆಸಿದ ಹಲವಾರು ತರಬೇತಿಗಳನ್ನು ಪರಿಗಣಿಸಿ ಉಡುಪಿ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಅತ್ಯುತ್ತಮ 10 ಘಟಕಗಳಲ್ಲಿ ಟಾಪ್ 3 ಪ್ರಶಸ್ತಿಗೆ ಜೆಸಿಐ ಬೆಳ್ತಂಗಡಿ ಪಡೆದುಕೊಂಡಿತು ಅದಲ್ಲದೆ ಇತರ ಕಾರ್ಯಕ್ರಮಗಳಿಗೆ ಹಲವಾರು ಮನ್ನಣೆ ಗಳಿಗೆ ಪಾತ್ರವಾಯಿತು.

ಜೆಸಿಐ ಭಾರತದ ವಲಯ 15ರ ವಲಯಾಧ್ಯಕ್ಷ ಅಭಿಲಾಶ್ ಬಿಎ ಇವರು ಪ್ರಶಸ್ತಿ ಪ್ರದಾನ ಮಾಡಿದರು. ವಲಯ ಉಪಾಧ್ಯಕ್ಷ ರಂಜಿತ್ ಹೆಚ್‌ ಡಿ ಹಾಗೂ ವಲಯಾಡಳಿತ ಮಂಡಳಿಯ ಪದಾಧಿಕಾರಿಗಳು, ಪೂರ್ವ ವಲಯಾಧ್ಯಕ್ಷರು, ಜೆಸಿಐ ಬೆಳ್ತಂಗಡಿಯ ಘಟಕಾಧ್ಯಕ್ಷೆ ಆಶಾಲತಾ, ಪ್ರಶಾಂತ್, ಸದಸ್ಯರಾದ ಹೇಮಾವತಿ ಕೆ, ಭವ್ಯಶ್ರೀ ಕೀರ್ತಿರಾಜ್ ರಂಜನ್ ಗುಡಿಗಾರ್, ಶೈಲೇಶ್ ಕೆ, ಪೂರ್ವಾಧ್ಯಕ್ಷರಾದ ಪ್ರಶಾಂತ್ ಲಾೖಲ, ಶಂಕರ್ ರಾವ್ ಬಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

Suddi Udaya

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya
error: Content is protected !!