July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪಟ್ರಮೆ ಗೆಳೆಯರ ಬಳಗದಿಂದ ಗಣೇಶ ಚತುರ್ಥಿ ಪ್ರಯುಕ್ತ ಅನಾರು ಶಾಲೆಯಲ್ಲಿ ಶ್ರಮದಾನ

ಪಟ್ರಮೆ : ಗೆಳೆಯರ ಬಳಗ ಪಟ್ರಮೆ ನೇತೃತ್ವದಲ್ಲಿ ಶಾಲಾ ಎಸ್ ಡಿ ಯಂ ಸಿ ಸಹಕಾರದಲ್ಲಿ ಶ್ರೀ ಗಣೇಶ ಚೌತಿ ಪ್ರಯುಕ್ತ ಸ.ಉ.ಹಿ.ಪ್ರಾಥಮಿಕ ಶಾಲೆ ಅನಾರಿನಲ್ಲಿ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಹಿರಿಯ ಕೃಷಿಕ ಡೊಂಬಯ್ಯ ಗೌಡರು ತೆಂಗಿನ ಗಿಡ ನೆಡುವ ಮೂಲಕ ಶ್ರಮದಾನ ಉದ್ಘಾಟಿಸಿದರು.

ಶಾಲಾ ಆವರಣದ ಸುತ್ತ ತುಂಬಿದ್ದ ಗಿಡ ಗಂಟಿಗಳನ್ನು ಸ್ವಚ್ಚಗೊಳಿಸಿ 12 ತೆಂಗಿನ ಗಿಡಗಳನ್ನು ನೆಡಲಾಯಿತು.
ಶಿರೀಷ್ ರಾಜ್ ಸಂಕೇಶ 3 ತೆಂಗಿನ ಗಿಡ, ಅಣ್ಣು ಗೌಡ ಹಿರ್ತಡ್ಕ 4, ಚಂದ್ರ ಶೇಖರ ಗೌಡ ಅನಾರು 3, ಶಾಯಿದಾ 1, ಶಾಲೆಯಿಂದ 1 ಹೀಗೆ 12 ತೆಂಗಿನ ಗಿಡಗಳನ್ನು ಉಚಿತವಾಗಿ ಒದಗಿಸಿದರು. ಜಯಂತ ಪಾದೇಜಾಲು, ದಿನೇಶ್ ಮೈಕೆ, ದೊಲ್ಲ ಗೌಡ ಜಾಲು ರವರು ಗಿಡ ಗಂಟಿಗಳನ್ನು ಸ್ವಚ್ಚಗೊಳಿಸಲು ಮಿಷನ್ ಒದಗಿಸಿದ್ದರು.

ಶ್ರಮದಾನದಲ್ಲಿ ಗೆಳೆಯರ ಬಳಗದ ಅಧ್ಯಕ್ಷ ಚೋಮ ಪಾದೇಜಾಲು, ಎಸ್ ಡಿ ಯಂ ಸಿ ಅಧ್ಯಕ್ಷ ಧನಂಜಯ ಗೌಡ, ಉಪಾಧ್ಯಕ್ಷೆ ರೇವತಿ, ಮಾಜಿ ಅಧ್ಯಕ್ಷರುಗಳಾದ ದೊಲ್ಲ ಗೌಡ, ಶ್ಯಾಮರಾಜ್, ಶಾಲಾ ಶಿಕ್ಷಕರಾದ ಜಯಂತ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಮಲ, ಡಿವೈಎಫ್ಐ ಪಟ್ರಮೆ ಅಧ್ಯಕ್ಷ ಭುವನೇಶ್ ನೆಕ್ಕರೆ, ಶಾಲಾ ಬಿಸಿಯೂಟ ನೌಕರರಾದ ರೇಖಾ, ಗೀತಾ ಮೊದಲಾದವರ ಸಹಿತ ಮೂವತ್ತಕ್ಕೂ ಹೆಚ್ಚು ಶ್ರಮದಾನಿಗಳು ಭಾಗವಹಿಸಿದ್ದರು.

ಆರಿಷ್ ಪಟ್ರಮೆ ಪಿಕಪ್ ಒದಗಿಸಿದ್ದರು. ನ್ಯಾಯವಾದಿ ಬಿ.ಎಂ. ಭಟ್ ಎಲ್ಲಾ ಶ್ರಮದಾನಿಗಳಿಗೆ ನೆನಪಿನ ಕಾಣಿಕಯನ್ನು ನೀಡಿದರು.

Related posts

ಶ್ರೀ ಧ.ಮಂ.ಪ.ಪೂ. ಕಾಲೇಜಿನ ಉಪನ್ಯಾಸಕರ ಸಂಘದ ವತಿಯಿಂದ ಗ್ರಂಥಪಾಲಕ ಮನೋಹರ ಶೆಟ್ಟಿಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

Suddi Udaya

ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ನಿವೃತ್ತ ಯೋಧ ಅಶೋಕ ಕುಮಾರ್ ಅವರಿಗೆ ಗೌರವ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಾ.28: ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಕಾಸರಗೋಡು – ಕರ್ನಾಟಕ ಚುಟುಕು ಕವಿಗೋಷ್ಠಿ

Suddi Udaya
error: Content is protected !!