23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.3 ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭ, ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ: ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಸೆ.೩ ರಂದು ಬೆಳಿಗ್ಗೆ ೧೦:೩೦ಕ್ಕೆ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭಗೊಳ್ಳಲಿದೆ.


ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆ ಸಮುದಾಯ ವೈದ್ಯಕೀಯ ವಿಭಾಗ ಮುಖ್ಯಸ್ಥ ಡಾ.ಪ್ರಸನ್ನ ಮಿತ್ರ ಉದ್ಘಾಟಿಸಲಿದ್ದಾರೆ. ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಮುರಳಿಕೃಷ್ಣ ಇರ್ವತ್ರಾಯ ಅಧ್ಯಕ್ಷತೆ ವಹಿಸಲಿರುವರು.
ಮುಖ್ಯ ಅತಿಥಿಗಳಾಗಿ ಎಂಆರ್‌ಪಿಎಲ್ ಚೀಫ್ ಜನರಲ್ ಮ್ಯಾನೇಜರ್ ಡಾ ರುಡಾಲ್ಫ್ ನೊರೊನ್ಹಾ, ಕಳೆಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ವಿಶ್ವನಾಥ ಹೆಚ್. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಹಾಗೂ ಕಾಯರ್ತಡ್ಕ ಕೊಂಗುAಪುಯ ಕಾಂಪ್ಲೆಕ್ಸ್ ಉದ್ಯಮಿ ಕೆ.ಎಮ್ ಚಾಕೋ ಭಾಗವಹಿಸಲಿದ್ದಾರೆ ಎಂದು ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಸಾಯಿ ಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ಹಾಗೂ ಹೊಯ್ಸಳ ಹೆಲ್ತ್ ಕೇರ್ ಮೂಡಿಗೆರೆ ಆಡಳಿತ ನಿರ್ದೇಶಕರು, ವೈದ್ಯರು ಹಾಗೂ ಸಿಬ್ಬಂದಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉದ್ಘಾಟನಾ ಸಮಾರಂಭ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.ವೈದ್ಯರ ತಪಾಸಣೆ ಮತ್ತು ಸೂಕ್ತ ಸಲಹೆ, ಉಚಿತ ಔಷಧಿ, ರಕ್ತದೊತ್ತಡ, ಹಿಮೋಗ್ಲೋಬಿನ್, ಮಧುಮೇಹ ತಪಾಸಣೆ, ಇಸಿಜಿ ಹಾಗೂ ಜೀವನ ಶೈಲಿ ಮತ್ತು ಪಥ್ಯ ಆಹಾರ ಬಗ್ಗೆ ಸಮಾಲೋಚನೆ ಕುರಿತು ಶಿಬಿರದಲ್ಲಿ ಮಾಹಿತಿ ಪಡೆಯಹುದು.

Related posts

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆ ಪ್ರಥಮ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

Suddi Udaya

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಬಂಜೆತನ ನಿವಾರಣೆ ಚಿಕಿತ್ಸೆಗೆ ಮೊದಲ ಐಯುಐ ವಿಭಾಗ ಉದ್ಘಾಟನೆ

Suddi Udaya

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya
error: Content is protected !!