July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್‌.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

ಬೆಳ್ತಂಗಡಿ: ಸುಮಾರು 12 ವಷ೯ಗಳ‌ ಹಿಂದೆ ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಸೌಜನ್ಯ ತಾಯಿ ಕುಸುಮಾವತಿ ಅವರು ಎಸ್‌.ಐ.ಟಿ ಅಧಿಕಾರಿಗಳಿಗೆ ಆ. 28 ರಂದು ದೂರು ನೀಡಿದ್ದು ದೂರನ್ನು ಸ್ವೀಕರಿಸಿದ ಅಧಿಕಾರಿಗಳು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹಿಂಬರಹ ನೀಡಿದ್ದಾರೆ.

ಸೌಜನ್ಯ ತಾಯಿ ಕುಸುಮಾವತಿ ಹಾಗೂ ಮನೆಯವರು ಗುರುವಾರ ಮಧ್ಯಾಹ್ನ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದುಅಧಿಕಾರಿಗಳ ಸೂಚನೆಯ ಮೇರೆಗೆ ಆರಂಭದಲ್ಲಿ ಅಲ್ಲಿಂದ ಹಿಂತಿರುಗಿದ್ದರು. ಆದರೆ ಬಳಿಕ ಅಧಿಕಾರಿಗಳ ಸೂಚನೆಯಂತೆ ಸೌಜನ್ಯ ತಾಯಿ ಕುಸುಮಾವತಿ ಎಸ್.ಐ.ಟಿ ಕಚೇರಿಗೆ ಬಂದು ದೂರನ್ನು ನೀಡಿದ್ದಾರೆ.

ಸಾಕ್ಷಿದೂರು ದಾರನಾಗಿ ಬಂದ ಚೆನ್ನಯ್ಯ ಯುಟ್ಯೂಬ‌ರ್ ಗಳಿಗೆ ನೀಡಿದ ಸಂದರ್ಶನದಲ್ಲಿ ಸೌಜನ್ಯ ಪ್ರಕರಣದ ಬಗ್ಗೆ ಹಲವು ಹೇಳಿಕೆಗಳನ್ನು ನೀಡಿದ್ದ ಈ ಹಿನ್ನಲೆಯಲ್ಲಿ ಈ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿರುವುದಾಗಿ ತಿಳಿದು ಬಂದಿದೆ. ದೂರಿನ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.

Related posts

ತಾಲೂಕು ಮಟ್ಟದ ಕ್ರೀಡಾ ಕೂಟ: ಮಚ್ಚಿನ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಡಿ.14: ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಮೇ 26: ವಿದ್ಯುತ್ ನಿಲುಗಡೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya
error: Content is protected !!