September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಕೆಸರ್ ಡೊಂಜಿ ದಿನ ಕ್ರೀಡಾಕೂಟ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಮುಂಡತ್ತೋಡಿ ಶ್ರೀಮತಿ ಶಾರದಾ ಇವರ ಗದ್ದೆಯಲ್ಲಿ ಕೆಸರಡೊಂಜಿ ದಿನ ಕ್ರೀಡಾಕೂಟ ನಡೆಯಿತು


ಕ್ರೀಡಾಕೂಟವನ್ನು ರೋಟರಿ ಕ್ಲಬ್ ಬೆಳ್ತಂಗಡಿ ಇದರ ಕಾರ್ಯದರ್ಶಿ ಡಾ|ದಯಾಕರ್ ಎಮ್ ಎಮ್ ರವರು ಗದ್ದೆಗೆ ಪೂಜೆ ಮಾಡಿ ಹಾಲು ಹಾಕಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು “ತುಳುನಾಡಿನ ಸಾಂಸ್ಕೃತಿಕ ಪರಂಪರೆಯಲ್ಲಿ ಗದ್ದೆಯ ಕೆಲಸಕ್ಕೆ ಮಹತ್ವ ಇದೆ. ಪಾಡ್ದನ, ಸಂಧಿಗಳು ಹಾಡುತ್ತ ನಮ್ಮ ಹಿರಿಯರು ತುಳು ಸಂಸ್ಕೃತಿಯನ್ನು ಬೆಳೆಸಿದ್ದಾರೆ. ಕೆಸರು ಚರ್ಮ ರೋಗ ನಿಯಂತ್ರಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ “ಎಂದು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ “ನಮ್ಮ ತುಳುನಾಡ ಸಂಸ್ಕೃತಿಯನ್ನು ಉಳಿಸುವಲ್ಲಿ ಕೆಸರುಡೊಂಜಿ ದಿನ ಕ್ರೀಡಾಕೂಟವು ಬಹಳ ಮಹತ್ತರವಾದುದು. ಬದಲಾಗುತ್ತಿರುವ ಯುವ ಜನಾಂಗಕ್ಕೆಇಂತಹ ಕ್ರೀಡಾಕೂಟಗಳ ಮೂಲಕ ನಮ್ಮ ಸಂಸ್ಕೃತಿಯ ಅರಿವು ಮೂಡಿಸಲು ಸಾಧ್ಯ”ಎಂದು ಹೇಳಿದರು.


ಗದ್ದೆಯ ಮಾಲಕಿಯಾದ ಶ್ರೀಮತಿ ಶಾರದಾ ಇವರನ್ನು ಶಾಲು ಹೊದಿಸಿ ಗೌರವಿಸಲಾಯಿತು. ಉಪಪ್ರಾಂಶುಪಾಲರಾದ ಡಾ.ರಾಜೇಶ್ ಬಿ, ಗ್ರಾಮ ಪಂಚಾಯತ್ ಸದಸ್ಯರಾದ ದೇವರಾಜ್ ಪೂಜಾರಿ,ಕನ್ನಡ ಉಪನ್ಯಾಸಕ ಡಾ.ಮಹಾವೀರ್ ಜೈನ್, ಯೋಜನಾಧಿಕಾರಿ ವಿಶ್ವನಾಥ್ ಎಸ್. ಸಹ ಯೋಜನಾಧಿಕಾರಿ ಶ್ರೀಮತಿ ಶೋಭಾ ಪಿ,ಉಪಸ್ಥಿತರಿದ್ದರು.
ಸ್ವಯಂ ಸೇವಕರಿಗೆ ಕೆಸರು ಗದ್ದೆ ಓಟ, ಹಾಳೆ ಓಟ, ವಾಲಿಬಾಲ್, ಥ್ರೋ ಬಾಲ್, ಕಂಬ ಸುತ್ತುವ ಓಟ,ಹಗ್ಗ ಜಗ್ಗಾಟ,ನಿಧಿ ಶೋಧ ಮುಂತಾದ ಸ್ಪರ್ಧೆಗಳನ್ನು ನಡೆಸಲಾಯಿತು.


ನಾಯಕಿ ರಾಶಿಕ ಕಾರ್ಯಕ್ರಮ ನಿರೂಪಿಸಿ, ಧನ್ಯ ಸ್ವಾಗತಿಸಿ,ಮೇಧಾ ವಂದಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್‌ ಪೂಂಜರಿಗೆ ತಾಲೂಕು ಒಕ್ಕಲಿಗ ಸಮುದಾಯದಿಂದ ಗೌರವಾರ್ಪಣೆ

Suddi Udaya

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರಿಗೆ ಸ್ವಿಟ್ಜರ್ಲೆಂಡ್‌ನ ಪ್ರತಿಷ್ಠಿತ ಡನ್‌ಸ್ಟರ್ ಬಿಸಿನೆಸ್ ಸ್ಕೂಲ್‌ನಿಂದ ಗೌರವ ಡಾಕ್ಟರೇಟ್ ಪ್ರದಾನ

Suddi Udaya
error: Content is protected !!