38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ತರಬೇತಿ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ ಹಾಗೂ ಮನ್ನಣೆಗಳು

ಬೆಳ್ತಂಗಡಿ: ಜೆಸಿಐ ವಲಯ 15 ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ತರಬೇತಿ ಸಮ್ಮೇಳನವು ಕಾರ್ಕಳದ ಬಾಲಜಿ ಹೊಟೇಲ್ ಸಭಾಂಗಣದಲ್ಲಿ ನಡೆಯಿತು.

ಜೆಸಿಐ ಬೆಳ್ತಂಗಡಿಯ ಸದಸ್ಯತ್ವ ಬೆಳವಣಿಗೆ ಹೊಸ ಜೆಸಿಐ ಘಟಕದ ಕೊಡುಗೆ ಹಾಗೂ ಜೆಸಿಐ ಭಾರತದ ವಿದ್ಯಾರ್ಥಿ ವೇತನ ನೀಡುವ ಫೌಂಡೇಶನ್ ಗೆ ನೀಡಿದ ದೇಣಿಗೆಗಳನ್ನು ಪರಿಗಣಿಸಿ ಅತ್ಯುತ್ತಮ 10 ಘಟಕದಲ್ಲಿ ಟಾಪ್ 6 ಪ್ರಶಸ್ತಿ ಪಡೆಯಿತು.

ಅದೇ ರೀತಿ ತರಬೇತಿ ವಿಭಾಗದಲ್ಲಿ ತಾಲೂಕಿನ ಸಂಘ ಸಂಸ್ಥೆಗಳು, ಶಾಲಾ-ಕಾಲೇಜುಗಳು ಹಾಗೂ ಜೇಸಿ ಸದಸ್ಯರಿಗಾಗಿ ನಡೆಸಿದ ಹಲವಾರು ತರಬೇತಿಗಳನ್ನು ಪರಿಗಣಿಸಿ ಉಡುಪಿ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಅತ್ಯುತ್ತಮ 10 ಘಟಕಗಳಲ್ಲಿ ಟಾಪ್ 3 ಪ್ರಶಸ್ತಿಗೆ ಜೆಸಿಐ ಬೆಳ್ತಂಗಡಿ ಪಡೆದುಕೊಂಡಿತು ಅದಲ್ಲದೆ ಇತರ ಕಾರ್ಯಕ್ರಮಗಳಿಗೆ ಹಲವಾರು ಮನ್ನಣೆ ಗಳಿಗೆ ಪಾತ್ರವಾಯಿತು.

ಜೆಸಿಐ ಭಾರತದ ವಲಯ 15ರ ವಲಯಾಧ್ಯಕ್ಷ ಅಭಿಲಾಶ್ ಬಿಎ ಇವರು ಪ್ರಶಸ್ತಿ ಪ್ರದಾನ ಮಾಡಿದರು. ವಲಯ ಉಪಾಧ್ಯಕ್ಷ ರಂಜಿತ್ ಹೆಚ್‌ ಡಿ ಹಾಗೂ ವಲಯಾಡಳಿತ ಮಂಡಳಿಯ ಪದಾಧಿಕಾರಿಗಳು, ಪೂರ್ವ ವಲಯಾಧ್ಯಕ್ಷರು, ಜೆಸಿಐ ಬೆಳ್ತಂಗಡಿಯ ಘಟಕಾಧ್ಯಕ್ಷೆ ಆಶಾಲತಾ, ಪ್ರಶಾಂತ್, ಸದಸ್ಯರಾದ ಹೇಮಾವತಿ ಕೆ, ಭವ್ಯಶ್ರೀ ಕೀರ್ತಿರಾಜ್ ರಂಜನ್ ಗುಡಿಗಾರ್, ಶೈಲೇಶ್ ಕೆ, ಪೂರ್ವಾಧ್ಯಕ್ಷರಾದ ಪ್ರಶಾಂತ್ ಲಾೖಲ, ಶಂಕರ್ ರಾವ್ ಬಿ ಉಪಸ್ಥಿತರಿದ್ದರು.

Related posts

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ಪ್ರಾರಂಭ :ಬಿಗಿ ಪೊಲೀಸ್ ಬಂದೋಬಸ್ತ್

Suddi Udaya

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ಸುಳ್ಯಇದರ 22 ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya
error: Content is protected !!