25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ತರಬೇತಿ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ ಹಾಗೂ ಮನ್ನಣೆಗಳು

ಬೆಳ್ತಂಗಡಿ: ಜೆಸಿಐ ವಲಯ 15 ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ತರಬೇತಿ ಸಮ್ಮೇಳನವು ಕಾರ್ಕಳದ ಬಾಲಜಿ ಹೊಟೇಲ್ ಸಭಾಂಗಣದಲ್ಲಿ ನಡೆಯಿತು.

ಜೆಸಿಐ ಬೆಳ್ತಂಗಡಿಯ ಸದಸ್ಯತ್ವ ಬೆಳವಣಿಗೆ ಹೊಸ ಜೆಸಿಐ ಘಟಕದ ಕೊಡುಗೆ ಹಾಗೂ ಜೆಸಿಐ ಭಾರತದ ವಿದ್ಯಾರ್ಥಿ ವೇತನ ನೀಡುವ ಫೌಂಡೇಶನ್ ಗೆ ನೀಡಿದ ದೇಣಿಗೆಗಳನ್ನು ಪರಿಗಣಿಸಿ ಅತ್ಯುತ್ತಮ 10 ಘಟಕದಲ್ಲಿ ಟಾಪ್ 6 ಪ್ರಶಸ್ತಿ ಪಡೆಯಿತು.

ಅದೇ ರೀತಿ ತರಬೇತಿ ವಿಭಾಗದಲ್ಲಿ ತಾಲೂಕಿನ ಸಂಘ ಸಂಸ್ಥೆಗಳು, ಶಾಲಾ-ಕಾಲೇಜುಗಳು ಹಾಗೂ ಜೇಸಿ ಸದಸ್ಯರಿಗಾಗಿ ನಡೆಸಿದ ಹಲವಾರು ತರಬೇತಿಗಳನ್ನು ಪರಿಗಣಿಸಿ ಉಡುಪಿ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಅತ್ಯುತ್ತಮ 10 ಘಟಕಗಳಲ್ಲಿ ಟಾಪ್ 3 ಪ್ರಶಸ್ತಿಗೆ ಜೆಸಿಐ ಬೆಳ್ತಂಗಡಿ ಪಡೆದುಕೊಂಡಿತು ಅದಲ್ಲದೆ ಇತರ ಕಾರ್ಯಕ್ರಮಗಳಿಗೆ ಹಲವಾರು ಮನ್ನಣೆ ಗಳಿಗೆ ಪಾತ್ರವಾಯಿತು.

ಜೆಸಿಐ ಭಾರತದ ವಲಯ 15ರ ವಲಯಾಧ್ಯಕ್ಷ ಅಭಿಲಾಶ್ ಬಿಎ ಇವರು ಪ್ರಶಸ್ತಿ ಪ್ರದಾನ ಮಾಡಿದರು. ವಲಯ ಉಪಾಧ್ಯಕ್ಷ ರಂಜಿತ್ ಹೆಚ್‌ ಡಿ ಹಾಗೂ ವಲಯಾಡಳಿತ ಮಂಡಳಿಯ ಪದಾಧಿಕಾರಿಗಳು, ಪೂರ್ವ ವಲಯಾಧ್ಯಕ್ಷರು, ಜೆಸಿಐ ಬೆಳ್ತಂಗಡಿಯ ಘಟಕಾಧ್ಯಕ್ಷೆ ಆಶಾಲತಾ, ಪ್ರಶಾಂತ್, ಸದಸ್ಯರಾದ ಹೇಮಾವತಿ ಕೆ, ಭವ್ಯಶ್ರೀ ಕೀರ್ತಿರಾಜ್ ರಂಜನ್ ಗುಡಿಗಾರ್, ಶೈಲೇಶ್ ಕೆ, ಪೂರ್ವಾಧ್ಯಕ್ಷರಾದ ಪ್ರಶಾಂತ್ ಲಾೖಲ, ಶಂಕರ್ ರಾವ್ ಬಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya

ಶ್ರೀ ಸ್ಟಾರ್ ಯುವಕ ಹಾಗೂ ಮಹಿಳಾ ಮಂಡಲದ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.94% ಫಲಿತಾಂಶ

Suddi Udaya
error: Content is protected !!