22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಪೂರ್ವಾಧ್ಯಕ್ಷ, ವಾಣಿ. ಪಿ.ಯು ಕಾಲೇಜಿನ ವಾಣಿಜ್ಯ ವಿಭಾಗ ಮುಖ್ಯಸ್ಥ, ಜೆಸಿಐ ವಲಯ ತರಬೇತುದಾರ ಜೆ.ಎಫ್.ಡಿ ಶಂಕರ್ ರಾವ್ ಬಿ ಇವರಿಗೆ ಕಾರ್ಕಳದ ಬಾಲಜಿ ಇನ್ ಹೊಟೇಲ್ ಸಭಾಂಗಣದಲ್ಲಿ ನಡೆದ ಈ ವರ್ಷದ ಜೆಸಿಐ ವಲಯದ ತರಬೇತಿ ಸಮ್ಮೇಳನದಲ್ಲಿ ತರಬೇತುದಾರನಾಗಿ ಜೇಸಿಗಳಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಸಂಘ ಸಂಸ್ಥೆಗಳಿಗೆ ಅತೀ ಹೆಚ್ಚು ತರಬೇತಿ ನೀಡಿರುವುದನ್ನು ಪರಿಗಣಿಸಿ ಜೆಸಿಐ ವಲಯ 15 ರಿಂದ ಕೊಡಲ್ಪಡುವ ಪ್ರೇರಣಾ ಪುರಸ್ಕಾರ-2025 ನೀಡಿ ಗೌರವಿಸಲಾಯಿತು.

ಈ ಪುರಸ್ಕಾರವನ್ನು ವಲಯಾಧ್ಯಕ್ಷ ಜೆಸಿ ಅಭಿಲಾಷ್ ಬಿ.ಎ ಇವರು ನೀಡಿ ಗೌರವಿಸಿದರು. ತರಬೇತಿ ವಿಭಾಗದ ನಿರ್ದೇಶಕಿ ಜೆಸಿ ಅಕ್ಷತಾ ಶೆಟ್ಟಿ, ಪ್ರಾಂತ್ಯ ಡಿ ವಲಯ ಉಪಾಧ್ಯಕ್ಷ ರಂಜಿತ್ ಎಚ್‌.ಡಿ, ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷೆ ಜೆಸಿ ಆಶಾಲತಾ ಪ್ರಶಾಂತ್ ವಲಯದ ಇತರ ಗಣ್ಯರು ಜೆಸಿಐ ಬೆಳ್ತಂಗಡಿಯ ಪೂರ್ವಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Related posts

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ಹಿಂದೂ ಕಮಿಟಿ ಹಾರ್ಝಿಲಿಯ ಇಸ್ರೇಲ್ ಸಂಘಟನೆಯಿಂದ ವೈದ್ಯಕೀಯ ನೆರವು ಹಸ್ತಾಂತರ-ಅಶಕ್ತ ಕುಟುಂಬಕ್ಕೆ ಆರ್ಥಿಕ ಸಹಕಾರ

Suddi Udaya

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya
error: Content is protected !!