25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಪೂರ್ವಾಧ್ಯಕ್ಷ, ವಾಣಿ. ಪಿ.ಯು ಕಾಲೇಜಿನ ವಾಣಿಜ್ಯ ವಿಭಾಗ ಮುಖ್ಯಸ್ಥ, ಜೆಸಿಐ ವಲಯ ತರಬೇತುದಾರ ಜೆ.ಎಫ್.ಡಿ ಶಂಕರ್ ರಾವ್ ಬಿ ಇವರಿಗೆ ಕಾರ್ಕಳದ ಬಾಲಜಿ ಇನ್ ಹೊಟೇಲ್ ಸಭಾಂಗಣದಲ್ಲಿ ನಡೆದ ಈ ವರ್ಷದ ಜೆಸಿಐ ವಲಯದ ತರಬೇತಿ ಸಮ್ಮೇಳನದಲ್ಲಿ ತರಬೇತುದಾರನಾಗಿ ಜೇಸಿಗಳಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಸಂಘ ಸಂಸ್ಥೆಗಳಿಗೆ ಅತೀ ಹೆಚ್ಚು ತರಬೇತಿ ನೀಡಿರುವುದನ್ನು ಪರಿಗಣಿಸಿ ಜೆಸಿಐ ವಲಯ 15 ರಿಂದ ಕೊಡಲ್ಪಡುವ ಪ್ರೇರಣಾ ಪುರಸ್ಕಾರ-2025 ನೀಡಿ ಗೌರವಿಸಲಾಯಿತು.

ಈ ಪುರಸ್ಕಾರವನ್ನು ವಲಯಾಧ್ಯಕ್ಷ ಜೆಸಿ ಅಭಿಲಾಷ್ ಬಿ.ಎ ಇವರು ನೀಡಿ ಗೌರವಿಸಿದರು. ತರಬೇತಿ ವಿಭಾಗದ ನಿರ್ದೇಶಕಿ ಜೆಸಿ ಅಕ್ಷತಾ ಶೆಟ್ಟಿ, ಪ್ರಾಂತ್ಯ ಡಿ ವಲಯ ಉಪಾಧ್ಯಕ್ಷ ರಂಜಿತ್ ಎಚ್‌.ಡಿ, ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷೆ ಜೆಸಿ ಆಶಾಲತಾ ಪ್ರಶಾಂತ್ ವಲಯದ ಇತರ ಗಣ್ಯರು ಜೆಸಿಐ ಬೆಳ್ತಂಗಡಿಯ ಪೂರ್ವಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ತಮಿಳುನಾಡು ಚುನಾವಣೆ ಕರ್ತವ್ಯಕ್ಕೆ ತೆರಳಿದ ಬೆಳ್ತಂಗಡಿ ಘಟಕದ ಗೃಹರಕ್ಷಕರು

Suddi Udaya

ಚಾರ್ಮಾಡಿ: ಪರ್ಲಾಣಿ ಸ. ಹಿ.ಪ್ರಾ. ಶಾಲೆಯ ನೂತನ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ನಾಟಿ ವೈದ್ಯ ಹೊನ್ನಪ್ಪ ಗೌಡ ನಿಧನ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

Suddi Udaya
error: Content is protected !!