September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪಟ್ರಮೆ ಗೆಳೆಯರ ಬಳಗದಿಂದ ಗಣೇಶ ಚತುರ್ಥಿ ಪ್ರಯುಕ್ತ ಅನಾರು ಶಾಲೆಯಲ್ಲಿ ಶ್ರಮದಾನ

ಪಟ್ರಮೆ : ಗೆಳೆಯರ ಬಳಗ ಪಟ್ರಮೆ ನೇತೃತ್ವದಲ್ಲಿ ಶಾಲಾ ಎಸ್ ಡಿ ಯಂ ಸಿ ಸಹಕಾರದಲ್ಲಿ ಶ್ರೀ ಗಣೇಶ ಚೌತಿ ಪ್ರಯುಕ್ತ ಸ.ಉ.ಹಿ.ಪ್ರಾಥಮಿಕ ಶಾಲೆ ಅನಾರಿನಲ್ಲಿ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಹಿರಿಯ ಕೃಷಿಕ ಡೊಂಬಯ್ಯ ಗೌಡರು ತೆಂಗಿನ ಗಿಡ ನೆಡುವ ಮೂಲಕ ಶ್ರಮದಾನ ಉದ್ಘಾಟಿಸಿದರು.

ಶಾಲಾ ಆವರಣದ ಸುತ್ತ ತುಂಬಿದ್ದ ಗಿಡ ಗಂಟಿಗಳನ್ನು ಸ್ವಚ್ಚಗೊಳಿಸಿ 12 ತೆಂಗಿನ ಗಿಡಗಳನ್ನು ನೆಡಲಾಯಿತು.
ಶಿರೀಷ್ ರಾಜ್ ಸಂಕೇಶ 3 ತೆಂಗಿನ ಗಿಡ, ಅಣ್ಣು ಗೌಡ ಹಿರ್ತಡ್ಕ 4, ಚಂದ್ರ ಶೇಖರ ಗೌಡ ಅನಾರು 3, ಶಾಯಿದಾ 1, ಶಾಲೆಯಿಂದ 1 ಹೀಗೆ 12 ತೆಂಗಿನ ಗಿಡಗಳನ್ನು ಉಚಿತವಾಗಿ ಒದಗಿಸಿದರು. ಜಯಂತ ಪಾದೇಜಾಲು, ದಿನೇಶ್ ಮೈಕೆ, ದೊಲ್ಲ ಗೌಡ ಜಾಲು ರವರು ಗಿಡ ಗಂಟಿಗಳನ್ನು ಸ್ವಚ್ಚಗೊಳಿಸಲು ಮಿಷನ್ ಒದಗಿಸಿದ್ದರು.

ಶ್ರಮದಾನದಲ್ಲಿ ಗೆಳೆಯರ ಬಳಗದ ಅಧ್ಯಕ್ಷ ಚೋಮ ಪಾದೇಜಾಲು, ಎಸ್ ಡಿ ಯಂ ಸಿ ಅಧ್ಯಕ್ಷ ಧನಂಜಯ ಗೌಡ, ಉಪಾಧ್ಯಕ್ಷೆ ರೇವತಿ, ಮಾಜಿ ಅಧ್ಯಕ್ಷರುಗಳಾದ ದೊಲ್ಲ ಗೌಡ, ಶ್ಯಾಮರಾಜ್, ಶಾಲಾ ಶಿಕ್ಷಕರಾದ ಜಯಂತ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಮಲ, ಡಿವೈಎಫ್ಐ ಪಟ್ರಮೆ ಅಧ್ಯಕ್ಷ ಭುವನೇಶ್ ನೆಕ್ಕರೆ, ಶಾಲಾ ಬಿಸಿಯೂಟ ನೌಕರರಾದ ರೇಖಾ, ಗೀತಾ ಮೊದಲಾದವರ ಸಹಿತ ಮೂವತ್ತಕ್ಕೂ ಹೆಚ್ಚು ಶ್ರಮದಾನಿಗಳು ಭಾಗವಹಿಸಿದ್ದರು.

ಆರಿಷ್ ಪಟ್ರಮೆ ಪಿಕಪ್ ಒದಗಿಸಿದ್ದರು. ನ್ಯಾಯವಾದಿ ಬಿ.ಎಂ. ಭಟ್ ಎಲ್ಲಾ ಶ್ರಮದಾನಿಗಳಿಗೆ ನೆನಪಿನ ಕಾಣಿಕಯನ್ನು ನೀಡಿದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

Suddi Udaya

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಕೆಮ್ಮಿನ ಸಿರಪ್‌ ಗೆ ವೈದ್ಯರ ಚೀಟಿ ಕಡ್ಡಾಯ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

Suddi Udaya
error: Content is protected !!