22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮೈರೋಳ್ತಡ್ಕ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಬಂದಾರು : ಶಿವಗೆಳೆಯರ ಬಳಗ ಮತ್ತು ನವ್ಯಶ್ರೀ ಯುವತಿ ಮಂಡಲ ಮೈರೋಳ್ತಡ್ಕ -ಬಂದಾರು ಇವುಗಳ ಸಂಯುಕ್ತ ಆಶ್ರಯದಲ್ಲಿ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಮೈರೋಳ್ತಡ್ಕ ವಠಾರದಲ್ಲಿ ಆ. 27 ರಂದು ಅನಂತರಾಮ ಶಬರಾಯರವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳಿಂದ ಜರುಗಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಕಿರಣ್ ಚಂದ್ರ ಡಿ ಪುಷ್ಪಗಿರಿ ಉರುವಾಲು, ಇವರುಗಳು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶಿವಗೆಳೆಯರ ಬಳಗದ ಅಧ್ಯಕ್ಷರಾದ ಚಂದಪ್ಪ ಗೌಡ ನಡುಮಜಲು ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಮಾಧವ ಗೌಡ ಧಾರ್ಮಿಕ ಭಾಷಣ ಮಾಡಿದರು. ಬಂದಾರು ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪ್ರಗತಿ ಪರ ಕೃಷಿಕರಾದ ಚೆನ್ನಪ್ಪ ಗೌಡ ಪಾಂಜಾಳ ಉಪಸ್ಥಿತರಿದ್ದರು.

ಮುಗೇರಡ್ಕ ನೇತ್ರಾವತಿ ನದಿಕಿನಾರೆಗೆ ಮಕ್ಕಳ ಕುಣಿತ ಭಜನಾ ತಂಡ, ಚೆಂಡೆ ಬಳಗ ದೊಂದಿಗೆ ವೈಭವ ಪೂರ್ಣ ಮೆರವಣಿಗೆಯೊಂದಿಗೆ ಗಣಪನ ಮೂರ್ತಿ ವಿಸರ್ಜನೆಗೊಂಡಿತು, ಮೈರೋಳ್ತಡ್ಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಜಿಲ್ಲೆಯ ಪ್ರಸಿದ್ದ ಕಲಾವಿದರ ಕೂಡುವಿಕೆಯಿಂದ ಶ್ರೀ ರಾಮದರ್ಶನ ಯಕ್ಷಗಾನ ಬಯಲಾಟ ನಡೆಯಿತು. ಭಕ್ತವೃಂದದ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು.

Related posts

ಶಿರ್ಲಾಲು : ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರಿಗೆ ಬಿಜೆಪಿ ಗ್ರಾಮ ಸಮಿತಿಯ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಎನ್ಎಂಎಂಎಸ್ ಪರೀಕ್ಷೆಯಲ್ಲಿ ಕನ್ಯಾಡಿ -ll ಶಾಲೆಯ ವಿದ್ಯಾರ್ಥಿ ನಿನಾದ ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ಧರ್ಮಸ್ಥಳ: ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನ ಕೊಡುಗೆ

Suddi Udaya
error: Content is protected !!