23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮೈರೋಳ್ತಡ್ಕ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಬಂದಾರು : ಶಿವಗೆಳೆಯರ ಬಳಗ ಮತ್ತು ನವ್ಯಶ್ರೀ ಯುವತಿ ಮಂಡಲ ಮೈರೋಳ್ತಡ್ಕ -ಬಂದಾರು ಇವುಗಳ ಸಂಯುಕ್ತ ಆಶ್ರಯದಲ್ಲಿ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಮೈರೋಳ್ತಡ್ಕ ವಠಾರದಲ್ಲಿ ಆ. 27 ರಂದು ಅನಂತರಾಮ ಶಬರಾಯರವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳಿಂದ ಜರುಗಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಕಿರಣ್ ಚಂದ್ರ ಡಿ ಪುಷ್ಪಗಿರಿ ಉರುವಾಲು, ಇವರುಗಳು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶಿವಗೆಳೆಯರ ಬಳಗದ ಅಧ್ಯಕ್ಷರಾದ ಚಂದಪ್ಪ ಗೌಡ ನಡುಮಜಲು ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಮಾಧವ ಗೌಡ ಧಾರ್ಮಿಕ ಭಾಷಣ ಮಾಡಿದರು. ಬಂದಾರು ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪ್ರಗತಿ ಪರ ಕೃಷಿಕರಾದ ಚೆನ್ನಪ್ಪ ಗೌಡ ಪಾಂಜಾಳ ಉಪಸ್ಥಿತರಿದ್ದರು.

ಮುಗೇರಡ್ಕ ನೇತ್ರಾವತಿ ನದಿಕಿನಾರೆಗೆ ಮಕ್ಕಳ ಕುಣಿತ ಭಜನಾ ತಂಡ, ಚೆಂಡೆ ಬಳಗ ದೊಂದಿಗೆ ವೈಭವ ಪೂರ್ಣ ಮೆರವಣಿಗೆಯೊಂದಿಗೆ ಗಣಪನ ಮೂರ್ತಿ ವಿಸರ್ಜನೆಗೊಂಡಿತು, ಮೈರೋಳ್ತಡ್ಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಜಿಲ್ಲೆಯ ಪ್ರಸಿದ್ದ ಕಲಾವಿದರ ಕೂಡುವಿಕೆಯಿಂದ ಶ್ರೀ ರಾಮದರ್ಶನ ಯಕ್ಷಗಾನ ಬಯಲಾಟ ನಡೆಯಿತು. ಭಕ್ತವೃಂದದ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು.

Related posts

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 1.25 ಲಕ್ಷ ಲಾಭ

Suddi Udaya

ಅಕ್ರಮವಾಗಿ ದಾಸ್ತಾನು ಮಾಡಿದ್ದ ಡಿಸೇಲ್ ಪತ್ತೆ: ಬೆಳ್ತಂಗಡಿ ಡಿವೈಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

Suddi Udaya

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya

ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಷ್ಣು ಸಹಸ್ರನಾಮ ಪಠಣ ಪ್ರಾರಂಭ

Suddi Udaya
error: Content is protected !!