September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮೈರೋಳ್ತಡ್ಕ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಬಂದಾರು : ಶಿವಗೆಳೆಯರ ಬಳಗ ಮತ್ತು ನವ್ಯಶ್ರೀ ಯುವತಿ ಮಂಡಲ ಮೈರೋಳ್ತಡ್ಕ -ಬಂದಾರು ಇವುಗಳ ಸಂಯುಕ್ತ ಆಶ್ರಯದಲ್ಲಿ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಮೈರೋಳ್ತಡ್ಕ ವಠಾರದಲ್ಲಿ ಆ. 27 ರಂದು ಅನಂತರಾಮ ಶಬರಾಯರವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳಿಂದ ಜರುಗಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಕಿರಣ್ ಚಂದ್ರ ಡಿ ಪುಷ್ಪಗಿರಿ ಉರುವಾಲು, ಇವರುಗಳು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶಿವಗೆಳೆಯರ ಬಳಗದ ಅಧ್ಯಕ್ಷರಾದ ಚಂದಪ್ಪ ಗೌಡ ನಡುಮಜಲು ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಮಾಧವ ಗೌಡ ಧಾರ್ಮಿಕ ಭಾಷಣ ಮಾಡಿದರು. ಬಂದಾರು ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪ್ರಗತಿ ಪರ ಕೃಷಿಕರಾದ ಚೆನ್ನಪ್ಪ ಗೌಡ ಪಾಂಜಾಳ ಉಪಸ್ಥಿತರಿದ್ದರು.

ಮುಗೇರಡ್ಕ ನೇತ್ರಾವತಿ ನದಿಕಿನಾರೆಗೆ ಮಕ್ಕಳ ಕುಣಿತ ಭಜನಾ ತಂಡ, ಚೆಂಡೆ ಬಳಗ ದೊಂದಿಗೆ ವೈಭವ ಪೂರ್ಣ ಮೆರವಣಿಗೆಯೊಂದಿಗೆ ಗಣಪನ ಮೂರ್ತಿ ವಿಸರ್ಜನೆಗೊಂಡಿತು, ಮೈರೋಳ್ತಡ್ಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಜಿಲ್ಲೆಯ ಪ್ರಸಿದ್ದ ಕಲಾವಿದರ ಕೂಡುವಿಕೆಯಿಂದ ಶ್ರೀ ರಾಮದರ್ಶನ ಯಕ್ಷಗಾನ ಬಯಲಾಟ ನಡೆಯಿತು. ಭಕ್ತವೃಂದದ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು.

Related posts

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya

ಬೆಳ್ತಂಗಡಿ: ಪಿ. ಎಂ. ಶ್ರೀ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಪಕ್ವಾಡದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಸ್ಪೋಟಕ ವಸ್ತು ಸ್ಪೋಟಗೊಂಡು ಬಾಲಕ ಗಾಯಗೊಂಡ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ

Suddi Udaya

ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ‘ಲಕ್ಷ್ಯ ಡೇ ಕೇರ್ ಸೆಂಟರ್’ ಹಾಗೂ ‘ಲಕ್ಷ್ಯ ಕೌನ್ಸಲಿಂಗ್ ಸೆಂಟರ್’ಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಅವರಿಂದ ಶ್ಲಾಘನೆ

Suddi Udaya

ಪದ್ಮುಂಜ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮ

Suddi Udaya
error: Content is protected !!