September 6, 2026
ಅಪರಾಧ ಸುದ್ದಿ

ರೆಖ್ಯ : ಆಕಸ್ಮಿಕವಾಗಿ ರಸ್ತೆ ಕಾಂಕ್ರಿಟ್ ಚರಂಡಿಯ ಒಳಗೆ ಬಿದ್ದು ಚಾಲಕ ಮೃತ್ಯು


ಬೆಳ್ತಂಗಡಿ: ರೆಖ್ಯಾ ಗ್ರಾಮ ನೇಲ್ಯಡ್ಕ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಲಾರಿಯನ್ನು ನಿಲ್ಲಿಸಿ ಮೂತ್ರ ವಿಸರ್ಜನೆಗೆಂದು ರಸ್ತೆ ಬದಿಗೆ ಹೋಗುವ ಸಮಯ ಆಕಸ್ಮಿಕವಾಗಿ ರಸ್ತೆ ಕಾಮಗಾರಿಯಲ್ಲಿರುವ ಕಾಂಕ್ರಿಟ್ ಚರಂಡಿಯ ಒಳಗೆ ಬಿದ್ದು ಚಾಲಕ ಸಾವನ್ನಪ್ಪಿದ ದುರ್ಘಟನೆ ಆ.28ರಂದು ವರದಿಯಾಗಿದೆ.


ಈ ಬಗ್ಗೆ ಬೆಂಗಳೂರು ನೆಲಮಂಗಲ ನಿವಾಸಿ ರಾಜಶೇಖರ ಎಂಬವರು ದೂರು ನೀಡಿ, ನನ್ನ ತಂದೆ ಹುನಮಂತರಾಯಪ್ಪ (60ವ) ರವರು ಲಾರಿಯಲ್ಲಿ ಚಾಲಕರಾಗಿದ್ದು, ಆ.27ರಂದು ರಾತ್ರಿ ಸಮಯ ಮಂಗಳೂರಿನಿಂದ ಬೆಂಗಳೂರು ಕಡೆಗೆ ಲಾರಿಯನ್ನು ಚಲಾಯಿಸಿಕೊಂಡು ಬಂದು, ಆ.28 ರಂದು ಮುಂಜಾನೆ 1 ಗಂಟೆ ಸುಮಾರಿಗೆ ಬೆಳ್ತಂಗಡಿ ತಾಲೂಕು ರೆಖ್ಯಾ ಗ್ರಾಮ ನೇಲ್ಯಡ್ಕ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಲಾರಿಯನ್ನು ನಿಲ್ಲಿಸಿ ಮೂತ್ರ ವಿಸರ್ಜನೆ ಅಥವಾ ಇನ್ಯಾವುದೋ ಕಾರಣಕ್ಕೆ ಲಾರಿಯಿಂದ ಇಳಿದು ರಸ್ತೆ ಬದಿಗೆ ಹೋಗುವ ಸಮಯ ಆಕಸ್ಮಿಕವಾಗಿ ರಸ್ತೆ ಕಾಮಗಾರಿಯಲ್ಲಿರುವ ಕಾಂಕ್ರೀಟ್ ಚರಂಡಿಯ ಒಳಗೆ ಬಿದ್ದು ಅಸ್ವಸ್ಥರಾದವರನ್ನು ಚಿಕಿತ್ಸೆಯ ಬಗ್ಗೆ ಆಸ್ಪತ್ರೆಗೆ ಸಾಗಿಸುವ ಸಮಯ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ: 43/2025 ಕಲಂ: 194 ಭಾ.ನಾ.ಸು.ಸಂ ರಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

Suddi Udaya

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ | ಬೆಳ್ತಂಗಡಯ ಇಬ್ಬರು ಮಂಗಳೂರು ಸಿಸಿಬಿ ಬಲೆಗೆ ರೂ. 3.2 ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ

Suddi Udaya

ಬಂದಾರು: ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಬಂಧನ, ಸೊತ್ತುಗಳು ವಶಕ್ಕೆ

Suddi Udaya
error: Content is protected !!