25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ

ವೇಣೂರು: ನವೀಕೃತ ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ 2000ನೇ ಇಸವಿಯಲ್ಲಿ ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಸಂದಭ೯ದಲ್ಲಿ ಶ್ರೀ ಬಾಹುಬಲಿ ಸಭಾಭವನವನ್ನು ನಿಮಾ೯ಣ ಮಾಡಿ ಲೋಕಾಪ೯ಣೆ ಮಾಡಲಾಗಿತ್ತು. ಈಗ ಈ ಸಭಾಭವನದ ವ್ಯವಸ್ಥೆಯನ್ನು ಇನ್ನಷ್ಟು ಉನ್ನತೀಕರಿಸಿ ಆಧುನಿಕವಾಗಿ ನವೀಕರಿಸಲಾಗಿದೆ.

ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆಯನ್ನು ಮೂಡುಬಿದ್ರಿ ಶ್ರೀ ಜೈನ ಮಠದ ಪರಮ ಪೂಜ್ಯ ,”ಭಾರತಭೂಷಣ” ಡಾ|ಸ್ವಸ್ತಿಶ್ರೀ ಚಾರುಕೀತಿ೯ ಪಂಡಿತಾಚಾಯ೯ವಯ೯ ಮಹಾಸ್ವಾಮೀಜಿಯವರ ಪಾವನ ಸಾನ್ನಿಧ್ಯದಲ್ಲಿ, ಶ್ರೀ ದಿಗಂಬರ ಜೈನ ತೀಥ೯ಕ್ಷೇತ್ರ ಸಮಿತಿಯ ಉಪಾಧ್ಯಕ್ಷ ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ|ಪದ್ಮಪ್ರಸಾದ್‌ ಅಜಿಲರ ಉಪಸ್ಥಿತಿಯಲ್ಲಿ, ಕನಾ೯ಟಕ ಸರಕಾರದ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್‌ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.

ಈ ಸಂದಭ೯ದಲ್ಲಿ ಬೆಳ್ಳಿಬೀಡು ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರರಾದ ಕೆ ಹೇಮರಾಜ್‌ ಬೆಳ್ಳಿಬೀಡು , ಶ್ರೀ ದಿಗಂಬರ ಜೈನ ತೀಥ೯ಕ್ಷೇತ್ರ ಸಮಿತಿಯ ಕಾಯ೯ದಶಿ೯ ವಿ.ಪ್ರವೀಣ್‌ ಕುಮಾರ್‌ ಇಂದ್ರ, ಕೋಶಾಧಿಕಾರಿ ಪಿ.ಜಯರಾಜ್‌ ಕಂಬ್ಳಿ , ಜತೆ ಕಾಯ೯ದಶಿ೯ ಮಹಾವೀರ್‌ ಜೈನ್‌ ಮೂಡುಕೋಡಿ, ಕಾಯ೯ಕಾರಿ ಸಮಿತಿಯ ಸದಸ್ಯರುಗಳಾದ ಬಿ.ರತ್ನವಮ೯ ಇಂದ್ರ, ಪ್ರವೀಣ್‌ ಅಜ್ರಿ, ಸುರೇಶ್‌ ಕುಮಾರ್‌ ಆರಿಗ, ಭರತ್‌ ಕುಮಾರ್‌ ಆರಿಗ , ಶಮಿ೯ತ್‌ ಕುಮಾರ್‌ ಹಾಗೂ ಹಿರಿಯ ಶ್ರಾವಕಿಯಾದ ಗುಣವತಿ ಎ. ಆಳ್ವ ಮತ್ತು ರಾಜ್ಯ ಜೈನ ಮಹಿಳಾ ಒಕ್ಕೂಟದ ನಿದೇ೯ಶಕಿಯಾದ ಸರೋಜಾ ಜಿ.ಜೈನ್‌ ,ಪುರೋಹಿತ ಸಚಿನ್‌ ಇಂದ್ರ ಮತ್ತಿತರರು ಉಪಸ್ಥಿತರಿದ್ದರು.

Related posts

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಬಂದಾರು : ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಧರ್ಮಸ್ಥಳದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಉದ್ದಿಮೆದಾರರ ಕಾರ್ಯಗಾರ

Suddi Udaya

ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಮುಹಮ್ಮದ್‌ ಕುಂಞಿ ನಿಧನ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

Suddi Udaya
error: Content is protected !!