September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್‌.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

ಬೆಳ್ತಂಗಡಿ: ಸುಮಾರು 12 ವಷ೯ಗಳ‌ ಹಿಂದೆ ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಸೌಜನ್ಯ ತಾಯಿ ಕುಸುಮಾವತಿ ಅವರು ಎಸ್‌.ಐ.ಟಿ ಅಧಿಕಾರಿಗಳಿಗೆ ಆ. 28 ರಂದು ದೂರು ನೀಡಿದ್ದು ದೂರನ್ನು ಸ್ವೀಕರಿಸಿದ ಅಧಿಕಾರಿಗಳು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹಿಂಬರಹ ನೀಡಿದ್ದಾರೆ.

ಸೌಜನ್ಯ ತಾಯಿ ಕುಸುಮಾವತಿ ಹಾಗೂ ಮನೆಯವರು ಗುರುವಾರ ಮಧ್ಯಾಹ್ನ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದುಅಧಿಕಾರಿಗಳ ಸೂಚನೆಯ ಮೇರೆಗೆ ಆರಂಭದಲ್ಲಿ ಅಲ್ಲಿಂದ ಹಿಂತಿರುಗಿದ್ದರು. ಆದರೆ ಬಳಿಕ ಅಧಿಕಾರಿಗಳ ಸೂಚನೆಯಂತೆ ಸೌಜನ್ಯ ತಾಯಿ ಕುಸುಮಾವತಿ ಎಸ್.ಐ.ಟಿ ಕಚೇರಿಗೆ ಬಂದು ದೂರನ್ನು ನೀಡಿದ್ದಾರೆ.

ಸಾಕ್ಷಿದೂರು ದಾರನಾಗಿ ಬಂದ ಚೆನ್ನಯ್ಯ ಯುಟ್ಯೂಬ‌ರ್ ಗಳಿಗೆ ನೀಡಿದ ಸಂದರ್ಶನದಲ್ಲಿ ಸೌಜನ್ಯ ಪ್ರಕರಣದ ಬಗ್ಗೆ ಹಲವು ಹೇಳಿಕೆಗಳನ್ನು ನೀಡಿದ್ದ ಈ ಹಿನ್ನಲೆಯಲ್ಲಿ ಈ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿರುವುದಾಗಿ ತಿಳಿದು ಬಂದಿದೆ. ದೂರಿನ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.

Related posts

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಜೆ ಇ ಇ ಮೈನ್ಸ್ – 2: ಎಕ್ಸೆಲ್ ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಕಾರ್ಯಕ್ರಮ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಎಕ್ಸೆಲ್ ಉದ್ಯೋಗಿಗಳಿಂದ ಅಭಿನಂದನಾ ಸಮಾರಂಭ

Suddi Udaya
error: Content is protected !!