July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಇಲ್ಲಿ ನಡೆದ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಸಂತ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅದ್ಭುತ ಸಾಧನೆ ಮೆರೆದಿದ್ದಾರೆ. ಒಟ್ಟು ಆರು ತಂಡಗಳು ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಫಲಿತಾಂಶ: 17ರ ವಯೋಮಿತಿ ಬಾಲಕರ ವಿಭಾಗ – ಸಂತ ತೆರೇಸಾ ಕನ್ನಡ ಮಾಧ್ಯಮ ಶಾಲೆ ಪ್ರಥಮ, ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ, 17ರ ವಯೋಮಿತಿ ಬಾಲಕಿಯರ ವಿಭಾಗ – ಸಂತ ತೆರೇಸಾ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ, 14ರ ವಯೋಮಿತಿ ಬಾಲಕಿಯರ ವಿಭಾಗ – ಸಂತ ತೆರೇಸಾ ಕನ್ನಡ ಮಾಧ್ಯಮ ಶಾಲೆ ಪ್ರಥಮ ಸ್ಥಾನ, 14ರ ವಯೋಮಿತಿ ಬಾಲಕರ ವಿಭಾಗ – ಸಂತ ತೆರೇಸಾ ಕನ್ನಡ ಮಾಧ್ಯಮ ಶಾಲೆ ಪ್ರಥಮ, ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ

ವೈಯಕ್ತಿಕ ಪ್ರಶಸ್ತಿಗಳು: ಧನುಷ್ ಕೆ, ಗ್ರೀಷ್ಮಾ – ಬೆಸ್ಟ್ ಆಲ್ ರೌಂಡರ್, ಮಹಮದ್ ತಮೀಮ್ – ಬೆಸ್ಟ್ ಗೋಲ್ ಕೀಪರ್, ಆಯುಷ ತುಲ್ ಮುಫಿದಾ, ಆಸ್ಟಿನ್ – ಬೆಸ್ಟ್ ಶೂಟರ್, ಭಕ್ತಿ (ಆಂಗ್ಲ ಮಾಧ್ಯಮ), ಭರತ್ (ಕನ್ನಡ ಮಾಧ್ಯಮ) – ಬೆಸ್ಟ್ ಗೋಲ್ ಕೀಪರ್, ಮಾನಸ (ಆಂಗ್ಲ ಮಾಧ್ಯಮ), ಮಹಮದ್ ಝಹೀಮ್ (ಕನ್ನಡ ಮಾಧ್ಯಮ) – ಬೆಸ್ಟ್ ಆಲ್ ರೌಂಡರ್, ದೀಕ್ಷಿತ್ (ಆಂಗ್ಲ ಮಾಧ್ಯಮ) – ಬೆಸ್ಟ್ ಶೂಟರ್,

ದೈಹಿಕ ಶಿಕ್ಷಣ ಶಿಕ್ಷಕ ವಿನ್ಸೆಂಟ್ ಸಿಕ್ವೇರಾ ಹಾಗೂ ಸಿರಾಜ್ ಮಾರ್ಗದರ್ಶನ ನೀಡಿರುತ್ತಾರೆ.

ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಭ. ಲೀನಾ ಡಿಸೋಜಾ, ಪಿಯು ಕಾಲೇಜು ಪ್ರಾಂಶುಪಾಲೆ ಭ. ಮೋಲಿ ಡಿಕುನ್ನ, ಸಂಚಾಲಕರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ವಿಜೇತರನ್ನು ಅಭಿನಂದಿಸಿದರು.

Related posts

ವಲಯ ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ವಲಯ ಬಂಟರ ಸಂಘ, ಉಜಿರೆ ಹಾಗೂ ಬಂಟರ ಗ್ರಾಮ ಸಮಿತಿ ಉಜಿರೆ ಮುಂಡಾಜೆ ಮತ್ತು ತೋಟತ್ತಾಡಿ ಇವುಗಳ ಸಹಭಾಗಿತ್ವದಲ್ಲಿ ಉಜಿರೆ ವಲಯ ಬಂಟರ ಕ್ರೀಡಾಕೂಟ

Suddi Udaya

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಫೆ.6: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya

ಮಿತ್ತಬಾಗಿಲು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ

Suddi Udaya
error: Content is protected !!