July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಪಪೂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂವಾದ

ಉಜಿರೆ: ವಿದ್ಯಾರ್ಥಿಗಳು ಮೊದಲು ತಮ್ಮ ಮಾರ್ಗವನ್ನು ತಿಳಿಯಬೇಕು. ತಮಗೆ ಇಷ್ಟವಾದ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಆಗ ನಾವು ಜೀವನದಲ್ಲಿ ಸಾರ್ಥಕತೆ ಕಾಣಬಹುದು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಅಮೃತ್ ಹಾಗೂ ಪರೀಕ್ಷಿತ್ ಗೋಖಲೆ ಹೇಳಿದರು.

ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಆಯೋಜಿಸಿದ ಹಿರಿಯ ವಿದ್ಯಾರ್ಥಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ದ್ವಿತೀಯ ವಿಜ್ಞಾನದ ತರಗತಿಯಲ್ಲಿ ಅಮೃತ್ ಅವರು ಮೂಲ ವಿಜ್ಞಾನದ ವಿವಿಧ ಅವಕಾಶಗಳ ಬಗ್ಗೆ ಮಾತನಾಡಿದರು.
ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಪ್ರಧಾನ ಸಂಯೋಜಕಿ ಅಂಜನಾ ಸ್ವಾಗತಿಸಿ , ಸಂಸ್ಕೃತ ಸಂಘದ ಉಪಾಧ್ಯಕ್ಷ ಯಶಸ್ವಿ ವಂದಿಸಿದರು . ಪ್ರಧಾನ ಕಾರ್ಯದರ್ಶಿ ಪ್ರಸನ್ನಾ ನಿರೂಪಿಸಿದರು.

ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ಕಲಾ ತರಗತಿಯಲ್ಲಿ ಪರೀಕ್ಷಿತ್ ಗೋಖಲೆ ಅವರು ವಾಣಿಜ್ಯಶಾಸ್ತ್ರದ ವಿವಿಧ ಅವಕಾಶಗಳ ಬಗ್ಗೆ ಮಾತನಾಡಿದರು.
ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಹ ಸಂಯೋಜಕಿ ಶ್ರೀಪೂರ್ಣಾ ನಿರೂಪಿಸಿದರು. ಧರೆಶ್ ಸ್ವಾಗತಿಸಿ , ಸಿರಿ .ಜಿ. ಗೌಡ ವಂದಿಸಿದರು .

Related posts

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ನಾಳೆ( ಜೂ.24): ವಿದ್ಯುತ್ ನಿಲುಗಡೆ

Suddi Udaya

ಬಿಸಿಯೂಟ ಸಿಬ್ಬಂದಿಗಳ ಮುಷ್ಕರದ ಹಿನ್ನಲೆ: ವಿದ್ಯಾರ್ಥಿಗಳಿಗೆ ಮನೆಯಿಂದಲೇ ಊಟದ ವ್ಯವಸ್ಥೆ ಕಲ್ಪಿಸಿದ ಸಮಾಜಸೇವಕ ಸಂತೋಷ್ ನಿನ್ನಿಕಲ್ಲು

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಷನ್ ವೇಣೂರು ವಲಯ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!