24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ತರಬೇತಿ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ ಹಾಗೂ ಮನ್ನಣೆಗಳು

ಬೆಳ್ತಂಗಡಿ: ಜೆಸಿಐ ವಲಯ 15 ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ತರಬೇತಿ ಸಮ್ಮೇಳನವು ಕಾರ್ಕಳದ ಬಾಲಜಿ ಹೊಟೇಲ್ ಸಭಾಂಗಣದಲ್ಲಿ ನಡೆಯಿತು.

ಜೆಸಿಐ ಬೆಳ್ತಂಗಡಿಯ ಸದಸ್ಯತ್ವ ಬೆಳವಣಿಗೆ ಹೊಸ ಜೆಸಿಐ ಘಟಕದ ಕೊಡುಗೆ ಹಾಗೂ ಜೆಸಿಐ ಭಾರತದ ವಿದ್ಯಾರ್ಥಿ ವೇತನ ನೀಡುವ ಫೌಂಡೇಶನ್ ಗೆ ನೀಡಿದ ದೇಣಿಗೆಗಳನ್ನು ಪರಿಗಣಿಸಿ ಅತ್ಯುತ್ತಮ 10 ಘಟಕದಲ್ಲಿ ಟಾಪ್ 6 ಪ್ರಶಸ್ತಿ ಪಡೆಯಿತು.

ಅದೇ ರೀತಿ ತರಬೇತಿ ವಿಭಾಗದಲ್ಲಿ ತಾಲೂಕಿನ ಸಂಘ ಸಂಸ್ಥೆಗಳು, ಶಾಲಾ-ಕಾಲೇಜುಗಳು ಹಾಗೂ ಜೇಸಿ ಸದಸ್ಯರಿಗಾಗಿ ನಡೆಸಿದ ಹಲವಾರು ತರಬೇತಿಗಳನ್ನು ಪರಿಗಣಿಸಿ ಉಡುಪಿ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಅತ್ಯುತ್ತಮ 10 ಘಟಕಗಳಲ್ಲಿ ಟಾಪ್ 3 ಪ್ರಶಸ್ತಿಗೆ ಜೆಸಿಐ ಬೆಳ್ತಂಗಡಿ ಪಡೆದುಕೊಂಡಿತು ಅದಲ್ಲದೆ ಇತರ ಕಾರ್ಯಕ್ರಮಗಳಿಗೆ ಹಲವಾರು ಮನ್ನಣೆ ಗಳಿಗೆ ಪಾತ್ರವಾಯಿತು.

ಜೆಸಿಐ ಭಾರತದ ವಲಯ 15ರ ವಲಯಾಧ್ಯಕ್ಷ ಅಭಿಲಾಶ್ ಬಿಎ ಇವರು ಪ್ರಶಸ್ತಿ ಪ್ರದಾನ ಮಾಡಿದರು. ವಲಯ ಉಪಾಧ್ಯಕ್ಷ ರಂಜಿತ್ ಹೆಚ್‌ ಡಿ ಹಾಗೂ ವಲಯಾಡಳಿತ ಮಂಡಳಿಯ ಪದಾಧಿಕಾರಿಗಳು, ಪೂರ್ವ ವಲಯಾಧ್ಯಕ್ಷರು, ಜೆಸಿಐ ಬೆಳ್ತಂಗಡಿಯ ಘಟಕಾಧ್ಯಕ್ಷೆ ಆಶಾಲತಾ, ಪ್ರಶಾಂತ್, ಸದಸ್ಯರಾದ ಹೇಮಾವತಿ ಕೆ, ಭವ್ಯಶ್ರೀ ಕೀರ್ತಿರಾಜ್ ರಂಜನ್ ಗುಡಿಗಾರ್, ಶೈಲೇಶ್ ಕೆ, ಪೂರ್ವಾಧ್ಯಕ್ಷರಾದ ಪ್ರಶಾಂತ್ ಲಾೖಲ, ಶಂಕರ್ ರಾವ್ ಬಿ ಉಪಸ್ಥಿತರಿದ್ದರು.

Related posts

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಕುಕ್ಕೇಡಿ ಗ್ರಾಮ‌ ಪಂಚಾಯತ್ ಗೆ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

Suddi Udaya

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya
error: Content is protected !!