32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪಟ್ರಮೆ ಗೆಳೆಯರ ಬಳಗದಿಂದ ಗಣೇಶ ಚತುರ್ಥಿ ಪ್ರಯುಕ್ತ ಅನಾರು ಶಾಲೆಯಲ್ಲಿ ಶ್ರಮದಾನ

ಪಟ್ರಮೆ : ಗೆಳೆಯರ ಬಳಗ ಪಟ್ರಮೆ ನೇತೃತ್ವದಲ್ಲಿ ಶಾಲಾ ಎಸ್ ಡಿ ಯಂ ಸಿ ಸಹಕಾರದಲ್ಲಿ ಶ್ರೀ ಗಣೇಶ ಚೌತಿ ಪ್ರಯುಕ್ತ ಸ.ಉ.ಹಿ.ಪ್ರಾಥಮಿಕ ಶಾಲೆ ಅನಾರಿನಲ್ಲಿ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಹಿರಿಯ ಕೃಷಿಕ ಡೊಂಬಯ್ಯ ಗೌಡರು ತೆಂಗಿನ ಗಿಡ ನೆಡುವ ಮೂಲಕ ಶ್ರಮದಾನ ಉದ್ಘಾಟಿಸಿದರು.

ಶಾಲಾ ಆವರಣದ ಸುತ್ತ ತುಂಬಿದ್ದ ಗಿಡ ಗಂಟಿಗಳನ್ನು ಸ್ವಚ್ಚಗೊಳಿಸಿ 12 ತೆಂಗಿನ ಗಿಡಗಳನ್ನು ನೆಡಲಾಯಿತು.
ಶಿರೀಷ್ ರಾಜ್ ಸಂಕೇಶ 3 ತೆಂಗಿನ ಗಿಡ, ಅಣ್ಣು ಗೌಡ ಹಿರ್ತಡ್ಕ 4, ಚಂದ್ರ ಶೇಖರ ಗೌಡ ಅನಾರು 3, ಶಾಯಿದಾ 1, ಶಾಲೆಯಿಂದ 1 ಹೀಗೆ 12 ತೆಂಗಿನ ಗಿಡಗಳನ್ನು ಉಚಿತವಾಗಿ ಒದಗಿಸಿದರು. ಜಯಂತ ಪಾದೇಜಾಲು, ದಿನೇಶ್ ಮೈಕೆ, ದೊಲ್ಲ ಗೌಡ ಜಾಲು ರವರು ಗಿಡ ಗಂಟಿಗಳನ್ನು ಸ್ವಚ್ಚಗೊಳಿಸಲು ಮಿಷನ್ ಒದಗಿಸಿದ್ದರು.

ಶ್ರಮದಾನದಲ್ಲಿ ಗೆಳೆಯರ ಬಳಗದ ಅಧ್ಯಕ್ಷ ಚೋಮ ಪಾದೇಜಾಲು, ಎಸ್ ಡಿ ಯಂ ಸಿ ಅಧ್ಯಕ್ಷ ಧನಂಜಯ ಗೌಡ, ಉಪಾಧ್ಯಕ್ಷೆ ರೇವತಿ, ಮಾಜಿ ಅಧ್ಯಕ್ಷರುಗಳಾದ ದೊಲ್ಲ ಗೌಡ, ಶ್ಯಾಮರಾಜ್, ಶಾಲಾ ಶಿಕ್ಷಕರಾದ ಜಯಂತ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಮಲ, ಡಿವೈಎಫ್ಐ ಪಟ್ರಮೆ ಅಧ್ಯಕ್ಷ ಭುವನೇಶ್ ನೆಕ್ಕರೆ, ಶಾಲಾ ಬಿಸಿಯೂಟ ನೌಕರರಾದ ರೇಖಾ, ಗೀತಾ ಮೊದಲಾದವರ ಸಹಿತ ಮೂವತ್ತಕ್ಕೂ ಹೆಚ್ಚು ಶ್ರಮದಾನಿಗಳು ಭಾಗವಹಿಸಿದ್ದರು.

ಆರಿಷ್ ಪಟ್ರಮೆ ಪಿಕಪ್ ಒದಗಿಸಿದ್ದರು. ನ್ಯಾಯವಾದಿ ಬಿ.ಎಂ. ಭಟ್ ಎಲ್ಲಾ ಶ್ರಮದಾನಿಗಳಿಗೆ ನೆನಪಿನ ಕಾಣಿಕಯನ್ನು ನೀಡಿದರು.

Related posts

ಭಾರಿ ಮಳೆಗೆ: ಪುತ್ತಿಲ ನಡುಕೇರ್ಯದಲ್ಲಿ ಬರೆ ಕುಸಿತ

Suddi Udaya

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

Suddi Udaya
error: Content is protected !!