23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮೈರೋಳ್ತಡ್ಕ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಬಂದಾರು : ಶಿವಗೆಳೆಯರ ಬಳಗ ಮತ್ತು ನವ್ಯಶ್ರೀ ಯುವತಿ ಮಂಡಲ ಮೈರೋಳ್ತಡ್ಕ -ಬಂದಾರು ಇವುಗಳ ಸಂಯುಕ್ತ ಆಶ್ರಯದಲ್ಲಿ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಮೈರೋಳ್ತಡ್ಕ ವಠಾರದಲ್ಲಿ ಆ. 27 ರಂದು ಅನಂತರಾಮ ಶಬರಾಯರವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳಿಂದ ಜರುಗಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಕಿರಣ್ ಚಂದ್ರ ಡಿ ಪುಷ್ಪಗಿರಿ ಉರುವಾಲು, ಇವರುಗಳು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶಿವಗೆಳೆಯರ ಬಳಗದ ಅಧ್ಯಕ್ಷರಾದ ಚಂದಪ್ಪ ಗೌಡ ನಡುಮಜಲು ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಮಾಧವ ಗೌಡ ಧಾರ್ಮಿಕ ಭಾಷಣ ಮಾಡಿದರು. ಬಂದಾರು ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪ್ರಗತಿ ಪರ ಕೃಷಿಕರಾದ ಚೆನ್ನಪ್ಪ ಗೌಡ ಪಾಂಜಾಳ ಉಪಸ್ಥಿತರಿದ್ದರು.

ಮುಗೇರಡ್ಕ ನೇತ್ರಾವತಿ ನದಿಕಿನಾರೆಗೆ ಮಕ್ಕಳ ಕುಣಿತ ಭಜನಾ ತಂಡ, ಚೆಂಡೆ ಬಳಗ ದೊಂದಿಗೆ ವೈಭವ ಪೂರ್ಣ ಮೆರವಣಿಗೆಯೊಂದಿಗೆ ಗಣಪನ ಮೂರ್ತಿ ವಿಸರ್ಜನೆಗೊಂಡಿತು, ಮೈರೋಳ್ತಡ್ಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಜಿಲ್ಲೆಯ ಪ್ರಸಿದ್ದ ಕಲಾವಿದರ ಕೂಡುವಿಕೆಯಿಂದ ಶ್ರೀ ರಾಮದರ್ಶನ ಯಕ್ಷಗಾನ ಬಯಲಾಟ ನಡೆಯಿತು. ಭಕ್ತವೃಂದದ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು.

Related posts

ಬಂದಾರು : ಬಂದಾರು ಗ್ರಾ.ಪಂ. ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಪುತ್ತೂರು ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya

ವೇಣೂರು ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya
error: Content is protected !!