September 6, 2026
ಅಪರಾಧ ಸುದ್ದಿ

ರೆಖ್ಯ : ಆಕಸ್ಮಿಕವಾಗಿ ರಸ್ತೆ ಕಾಂಕ್ರಿಟ್ ಚರಂಡಿಯ ಒಳಗೆ ಬಿದ್ದು ಚಾಲಕ ಮೃತ್ಯು


ಬೆಳ್ತಂಗಡಿ: ರೆಖ್ಯಾ ಗ್ರಾಮ ನೇಲ್ಯಡ್ಕ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಲಾರಿಯನ್ನು ನಿಲ್ಲಿಸಿ ಮೂತ್ರ ವಿಸರ್ಜನೆಗೆಂದು ರಸ್ತೆ ಬದಿಗೆ ಹೋಗುವ ಸಮಯ ಆಕಸ್ಮಿಕವಾಗಿ ರಸ್ತೆ ಕಾಮಗಾರಿಯಲ್ಲಿರುವ ಕಾಂಕ್ರಿಟ್ ಚರಂಡಿಯ ಒಳಗೆ ಬಿದ್ದು ಚಾಲಕ ಸಾವನ್ನಪ್ಪಿದ ದುರ್ಘಟನೆ ಆ.28ರಂದು ವರದಿಯಾಗಿದೆ.


ಈ ಬಗ್ಗೆ ಬೆಂಗಳೂರು ನೆಲಮಂಗಲ ನಿವಾಸಿ ರಾಜಶೇಖರ ಎಂಬವರು ದೂರು ನೀಡಿ, ನನ್ನ ತಂದೆ ಹುನಮಂತರಾಯಪ್ಪ (60ವ) ರವರು ಲಾರಿಯಲ್ಲಿ ಚಾಲಕರಾಗಿದ್ದು, ಆ.27ರಂದು ರಾತ್ರಿ ಸಮಯ ಮಂಗಳೂರಿನಿಂದ ಬೆಂಗಳೂರು ಕಡೆಗೆ ಲಾರಿಯನ್ನು ಚಲಾಯಿಸಿಕೊಂಡು ಬಂದು, ಆ.28 ರಂದು ಮುಂಜಾನೆ 1 ಗಂಟೆ ಸುಮಾರಿಗೆ ಬೆಳ್ತಂಗಡಿ ತಾಲೂಕು ರೆಖ್ಯಾ ಗ್ರಾಮ ನೇಲ್ಯಡ್ಕ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಲಾರಿಯನ್ನು ನಿಲ್ಲಿಸಿ ಮೂತ್ರ ವಿಸರ್ಜನೆ ಅಥವಾ ಇನ್ಯಾವುದೋ ಕಾರಣಕ್ಕೆ ಲಾರಿಯಿಂದ ಇಳಿದು ರಸ್ತೆ ಬದಿಗೆ ಹೋಗುವ ಸಮಯ ಆಕಸ್ಮಿಕವಾಗಿ ರಸ್ತೆ ಕಾಮಗಾರಿಯಲ್ಲಿರುವ ಕಾಂಕ್ರೀಟ್ ಚರಂಡಿಯ ಒಳಗೆ ಬಿದ್ದು ಅಸ್ವಸ್ಥರಾದವರನ್ನು ಚಿಕಿತ್ಸೆಯ ಬಗ್ಗೆ ಆಸ್ಪತ್ರೆಗೆ ಸಾಗಿಸುವ ಸಮಯ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ: 43/2025 ಕಲಂ: 194 ಭಾ.ನಾ.ಸು.ಸಂ ರಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

Suddi Udaya

ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!