25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.3 ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭ, ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ: ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಸೆ.೩ ರಂದು ಬೆಳಿಗ್ಗೆ ೧೦:೩೦ಕ್ಕೆ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭಗೊಳ್ಳಲಿದೆ.


ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆ ಸಮುದಾಯ ವೈದ್ಯಕೀಯ ವಿಭಾಗ ಮುಖ್ಯಸ್ಥ ಡಾ.ಪ್ರಸನ್ನ ಮಿತ್ರ ಉದ್ಘಾಟಿಸಲಿದ್ದಾರೆ. ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಮುರಳಿಕೃಷ್ಣ ಇರ್ವತ್ರಾಯ ಅಧ್ಯಕ್ಷತೆ ವಹಿಸಲಿರುವರು.
ಮುಖ್ಯ ಅತಿಥಿಗಳಾಗಿ ಎಂಆರ್‌ಪಿಎಲ್ ಚೀಫ್ ಜನರಲ್ ಮ್ಯಾನೇಜರ್ ಡಾ ರುಡಾಲ್ಫ್ ನೊರೊನ್ಹಾ, ಕಳೆಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ವಿಶ್ವನಾಥ ಹೆಚ್. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಹಾಗೂ ಕಾಯರ್ತಡ್ಕ ಕೊಂಗುAಪುಯ ಕಾಂಪ್ಲೆಕ್ಸ್ ಉದ್ಯಮಿ ಕೆ.ಎಮ್ ಚಾಕೋ ಭಾಗವಹಿಸಲಿದ್ದಾರೆ ಎಂದು ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಸಾಯಿ ಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ಹಾಗೂ ಹೊಯ್ಸಳ ಹೆಲ್ತ್ ಕೇರ್ ಮೂಡಿಗೆರೆ ಆಡಳಿತ ನಿರ್ದೇಶಕರು, ವೈದ್ಯರು ಹಾಗೂ ಸಿಬ್ಬಂದಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉದ್ಘಾಟನಾ ಸಮಾರಂಭ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.ವೈದ್ಯರ ತಪಾಸಣೆ ಮತ್ತು ಸೂಕ್ತ ಸಲಹೆ, ಉಚಿತ ಔಷಧಿ, ರಕ್ತದೊತ್ತಡ, ಹಿಮೋಗ್ಲೋಬಿನ್, ಮಧುಮೇಹ ತಪಾಸಣೆ, ಇಸಿಜಿ ಹಾಗೂ ಜೀವನ ಶೈಲಿ ಮತ್ತು ಪಥ್ಯ ಆಹಾರ ಬಗ್ಗೆ ಸಮಾಲೋಚನೆ ಕುರಿತು ಶಿಬಿರದಲ್ಲಿ ಮಾಹಿತಿ ಪಡೆಯಹುದು.

Related posts

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ಲಾಯಿಲ : ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆವಿದ್ಯಾರ್ಥಿಗಳಿಂದ ಸಿ.ಸಿ. ಟಿ.ವಿ ಹಸ್ತಾಂತರ ಹಾಗೂ ವರ್ಗಾವಣೆಗೊಂಡ ಶಿಕ್ಷಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!