July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.3 ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭ, ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ: ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಸೆ.೩ ರಂದು ಬೆಳಿಗ್ಗೆ ೧೦:೩೦ಕ್ಕೆ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭಗೊಳ್ಳಲಿದೆ.


ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆ ಸಮುದಾಯ ವೈದ್ಯಕೀಯ ವಿಭಾಗ ಮುಖ್ಯಸ್ಥ ಡಾ.ಪ್ರಸನ್ನ ಮಿತ್ರ ಉದ್ಘಾಟಿಸಲಿದ್ದಾರೆ. ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಮುರಳಿಕೃಷ್ಣ ಇರ್ವತ್ರಾಯ ಅಧ್ಯಕ್ಷತೆ ವಹಿಸಲಿರುವರು.
ಮುಖ್ಯ ಅತಿಥಿಗಳಾಗಿ ಎಂಆರ್‌ಪಿಎಲ್ ಚೀಫ್ ಜನರಲ್ ಮ್ಯಾನೇಜರ್ ಡಾ ರುಡಾಲ್ಫ್ ನೊರೊನ್ಹಾ, ಕಳೆಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ವಿಶ್ವನಾಥ ಹೆಚ್. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಹಾಗೂ ಕಾಯರ್ತಡ್ಕ ಕೊಂಗುAಪುಯ ಕಾಂಪ್ಲೆಕ್ಸ್ ಉದ್ಯಮಿ ಕೆ.ಎಮ್ ಚಾಕೋ ಭಾಗವಹಿಸಲಿದ್ದಾರೆ ಎಂದು ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಸಾಯಿ ಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ಹಾಗೂ ಹೊಯ್ಸಳ ಹೆಲ್ತ್ ಕೇರ್ ಮೂಡಿಗೆರೆ ಆಡಳಿತ ನಿರ್ದೇಶಕರು, ವೈದ್ಯರು ಹಾಗೂ ಸಿಬ್ಬಂದಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉದ್ಘಾಟನಾ ಸಮಾರಂಭ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.ವೈದ್ಯರ ತಪಾಸಣೆ ಮತ್ತು ಸೂಕ್ತ ಸಲಹೆ, ಉಚಿತ ಔಷಧಿ, ರಕ್ತದೊತ್ತಡ, ಹಿಮೋಗ್ಲೋಬಿನ್, ಮಧುಮೇಹ ತಪಾಸಣೆ, ಇಸಿಜಿ ಹಾಗೂ ಜೀವನ ಶೈಲಿ ಮತ್ತು ಪಥ್ಯ ಆಹಾರ ಬಗ್ಗೆ ಸಮಾಲೋಚನೆ ಕುರಿತು ಶಿಬಿರದಲ್ಲಿ ಮಾಹಿತಿ ಪಡೆಯಹುದು.

Related posts

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಕಾಶಿಪಟ್ಣ: ಮಜಲಡ್ಡ ನಿವಾಸಿ ಮಣ್ಯಪ್ಪ ಪೂಜಾರಿ ನಿಧನ

Suddi Udaya

ಮಣಿಪುರದಲ್ಲಿ ಮಹಿಳೆಯರ ಮೇಲಾದ ದೌಜ೯ನ್ಯಕ್ಕೆ ಖಂಡನೆ – ಬೆಳ್ತಂಗಡಿ ಕ್ರೈಸ್ತ ಸಂಘಟನೆಗಳ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆ- ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ – ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹ- ಜಡಿಮಳೆಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಭಾಗಿ

Suddi Udaya
error: Content is protected !!