25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.3 ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭ, ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ: ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಸೆ.೩ ರಂದು ಬೆಳಿಗ್ಗೆ ೧೦:೩೦ಕ್ಕೆ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭಗೊಳ್ಳಲಿದೆ.


ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆ ಸಮುದಾಯ ವೈದ್ಯಕೀಯ ವಿಭಾಗ ಮುಖ್ಯಸ್ಥ ಡಾ.ಪ್ರಸನ್ನ ಮಿತ್ರ ಉದ್ಘಾಟಿಸಲಿದ್ದಾರೆ. ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಮುರಳಿಕೃಷ್ಣ ಇರ್ವತ್ರಾಯ ಅಧ್ಯಕ್ಷತೆ ವಹಿಸಲಿರುವರು.
ಮುಖ್ಯ ಅತಿಥಿಗಳಾಗಿ ಎಂಆರ್‌ಪಿಎಲ್ ಚೀಫ್ ಜನರಲ್ ಮ್ಯಾನೇಜರ್ ಡಾ ರುಡಾಲ್ಫ್ ನೊರೊನ್ಹಾ, ಕಳೆಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ವಿಶ್ವನಾಥ ಹೆಚ್. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಹಾಗೂ ಕಾಯರ್ತಡ್ಕ ಕೊಂಗುAಪುಯ ಕಾಂಪ್ಲೆಕ್ಸ್ ಉದ್ಯಮಿ ಕೆ.ಎಮ್ ಚಾಕೋ ಭಾಗವಹಿಸಲಿದ್ದಾರೆ ಎಂದು ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಸಾಯಿ ಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ಹಾಗೂ ಹೊಯ್ಸಳ ಹೆಲ್ತ್ ಕೇರ್ ಮೂಡಿಗೆರೆ ಆಡಳಿತ ನಿರ್ದೇಶಕರು, ವೈದ್ಯರು ಹಾಗೂ ಸಿಬ್ಬಂದಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉದ್ಘಾಟನಾ ಸಮಾರಂಭ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.ವೈದ್ಯರ ತಪಾಸಣೆ ಮತ್ತು ಸೂಕ್ತ ಸಲಹೆ, ಉಚಿತ ಔಷಧಿ, ರಕ್ತದೊತ್ತಡ, ಹಿಮೋಗ್ಲೋಬಿನ್, ಮಧುಮೇಹ ತಪಾಸಣೆ, ಇಸಿಜಿ ಹಾಗೂ ಜೀವನ ಶೈಲಿ ಮತ್ತು ಪಥ್ಯ ಆಹಾರ ಬಗ್ಗೆ ಸಮಾಲೋಚನೆ ಕುರಿತು ಶಿಬಿರದಲ್ಲಿ ಮಾಹಿತಿ ಪಡೆಯಹುದು.

Related posts

ಬೆಳ್ತಂಗಡಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಆಯುಧ ಪೂಜೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆ

Suddi Udaya
error: Content is protected !!