23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್‌.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

ಬೆಳ್ತಂಗಡಿ: ಸುಮಾರು 12 ವಷ೯ಗಳ‌ ಹಿಂದೆ ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಸೌಜನ್ಯ ತಾಯಿ ಕುಸುಮಾವತಿ ಅವರು ಎಸ್‌.ಐ.ಟಿ ಅಧಿಕಾರಿಗಳಿಗೆ ಆ. 28 ರಂದು ದೂರು ನೀಡಿದ್ದು ದೂರನ್ನು ಸ್ವೀಕರಿಸಿದ ಅಧಿಕಾರಿಗಳು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹಿಂಬರಹ ನೀಡಿದ್ದಾರೆ.

ಸೌಜನ್ಯ ತಾಯಿ ಕುಸುಮಾವತಿ ಹಾಗೂ ಮನೆಯವರು ಗುರುವಾರ ಮಧ್ಯಾಹ್ನ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದುಅಧಿಕಾರಿಗಳ ಸೂಚನೆಯ ಮೇರೆಗೆ ಆರಂಭದಲ್ಲಿ ಅಲ್ಲಿಂದ ಹಿಂತಿರುಗಿದ್ದರು. ಆದರೆ ಬಳಿಕ ಅಧಿಕಾರಿಗಳ ಸೂಚನೆಯಂತೆ ಸೌಜನ್ಯ ತಾಯಿ ಕುಸುಮಾವತಿ ಎಸ್.ಐ.ಟಿ ಕಚೇರಿಗೆ ಬಂದು ದೂರನ್ನು ನೀಡಿದ್ದಾರೆ.

ಸಾಕ್ಷಿದೂರು ದಾರನಾಗಿ ಬಂದ ಚೆನ್ನಯ್ಯ ಯುಟ್ಯೂಬ‌ರ್ ಗಳಿಗೆ ನೀಡಿದ ಸಂದರ್ಶನದಲ್ಲಿ ಸೌಜನ್ಯ ಪ್ರಕರಣದ ಬಗ್ಗೆ ಹಲವು ಹೇಳಿಕೆಗಳನ್ನು ನೀಡಿದ್ದ ಈ ಹಿನ್ನಲೆಯಲ್ಲಿ ಈ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿರುವುದಾಗಿ ತಿಳಿದು ಬಂದಿದೆ. ದೂರಿನ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿ ವೀಲ್ ಚಯರ್ ವಿತರಣೆ

Suddi Udaya

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅವಹೇಳನ ಮಾಡದಂತೆ ಮೇಲಂತಬೆಟ್ಟು ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ‍ಭೇಟಿ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಶಕ್ತರಿಗೆ ಆರ್ಥಿಕ ಸಹಕಾರ, 500 ಗಿಡಗಳ ವಿತರಣೆಯೊಂದಿಗೆ ವಿಶಿಷ್ಟ ರೀತಿಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya
error: Content is protected !!