July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್‌.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

ಬೆಳ್ತಂಗಡಿ: ಸುಮಾರು 12 ವಷ೯ಗಳ‌ ಹಿಂದೆ ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಸೌಜನ್ಯ ತಾಯಿ ಕುಸುಮಾವತಿ ಅವರು ಎಸ್‌.ಐ.ಟಿ ಅಧಿಕಾರಿಗಳಿಗೆ ಆ. 28 ರಂದು ದೂರು ನೀಡಿದ್ದು ದೂರನ್ನು ಸ್ವೀಕರಿಸಿದ ಅಧಿಕಾರಿಗಳು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹಿಂಬರಹ ನೀಡಿದ್ದಾರೆ.

ಸೌಜನ್ಯ ತಾಯಿ ಕುಸುಮಾವತಿ ಹಾಗೂ ಮನೆಯವರು ಗುರುವಾರ ಮಧ್ಯಾಹ್ನ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದುಅಧಿಕಾರಿಗಳ ಸೂಚನೆಯ ಮೇರೆಗೆ ಆರಂಭದಲ್ಲಿ ಅಲ್ಲಿಂದ ಹಿಂತಿರುಗಿದ್ದರು. ಆದರೆ ಬಳಿಕ ಅಧಿಕಾರಿಗಳ ಸೂಚನೆಯಂತೆ ಸೌಜನ್ಯ ತಾಯಿ ಕುಸುಮಾವತಿ ಎಸ್.ಐ.ಟಿ ಕಚೇರಿಗೆ ಬಂದು ದೂರನ್ನು ನೀಡಿದ್ದಾರೆ.

ಸಾಕ್ಷಿದೂರು ದಾರನಾಗಿ ಬಂದ ಚೆನ್ನಯ್ಯ ಯುಟ್ಯೂಬ‌ರ್ ಗಳಿಗೆ ನೀಡಿದ ಸಂದರ್ಶನದಲ್ಲಿ ಸೌಜನ್ಯ ಪ್ರಕರಣದ ಬಗ್ಗೆ ಹಲವು ಹೇಳಿಕೆಗಳನ್ನು ನೀಡಿದ್ದ ಈ ಹಿನ್ನಲೆಯಲ್ಲಿ ಈ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿರುವುದಾಗಿ ತಿಳಿದು ಬಂದಿದೆ. ದೂರಿನ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.

Related posts

ಲಾಯಿಲ ಗ್ರಾಮ ಪಂಚಾಯತ್ ನಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ದಸ್ತಗಿರಿ

Suddi Udaya

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಕರಂಬಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ‌ ಉತ್ಸವ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಸೇಲ್, ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya
error: Content is protected !!