23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶ ಚತುರ್ಥಿ ದಿನದಂದು ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹ : 8000 ಭಕ್ತರಿಂದ ಅನ್ನ ಪ್ರಸಾದ ಸ್ವೀಕಾರ

ಕೊಕ್ಕಡ: ಗಣೇಶ ಚತುರ್ಥಿ ದಿನದಂದು ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹವಾಗಿದೆ ಎಂದು ದೇಗುಲ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಮಾಹಿತಿ ನೀಡಿದ್ದಾರೆ.

ಅವಲಕ್ಕಿ ಪಂಚಕಜ್ಜಾಯದ ರಶೀದಿ ಸಂಖ್ಯೆಗಳು 11455, ಅಪ್ಪ ಪ್ರಸಾದ 11215, ಕಡ್ಲೆ ಪಂಚಕಜ್ಜಾಯ 3117, ಲಾಡು ಪ್ರಸಾದ 4635, ಮೋದಕ ಪ್ರಸಾದ 5004 ಮತ್ತು ಗಣಹೋಮ ವಿಶೇಷ ಸೇವೆಗೆಂದು 25 ರಶೀದಿಗಳನ್ನು ಮಾಡಲಾಗಿದೆ.

ಚತುರ್ಥಿ ದಿನದಂದು ದೇಗುಲದಲ್ಲಿ ಅಂದಾಜು 8000 ಭಕ್ತರು ಭೋಜನ ಪ್ರಸಾದ ಸ್ವೀಕರಿಸಿದ್ದಾರೆ. ಗಂಟೆ ಗಣಪತಿ ಎಂದೇ ಪ್ರಸಿದ್ಧಿಯಾಗಿರುವ ಸೌತಡ್ಕ ದೇವಸ್ಥಾನಕ್ಕೆ ಚತುರ್ಥಿ ದಿನದಂದು ಬೇರೆ ಬೇರೆ ತಾಲೂಕು, ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದರು.

Related posts

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ಬೆಳ್ತಂಗಡಿ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ

Suddi Udaya

ಜೂ.15 : ಅಳದಂಗಡಿಯಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಶಾಖೆ ಉದ್ಘಾಟನೆ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!