25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಳ್ತಂಗಡಿ : ದಿನಾಂಕ 01-03-2014 ರಂದು ಬೆಳ್ತಂಗಡಿ ಉಜಿರೆಯಲ್ಲಿರುವ ವಸತಿಗೃಹದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ: 126/2014, ಕಲಂ:302.201 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಪ್ರಕರಣದ ಆರೋಪಿಯಾದ ಚಿಕ್ಕಮಗಳೂರು ನಿವಾಸಿ ಬಾಳಪ್ಪ ಎಂ ಕಳ್ಳೊಳ್ಳಿ ಎಂಬಾತನನ್ನು ಬಂಧಿಸಿ, ವಿಚಾರಣೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರಾದ ಲಿಂಗಪ್ಪ ಪೂಜಾರಿ ರವರು ಸೂಕ್ತ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಬೆಳ್ತಂಗಡಿ cj&jmfc ನ್ಯಾಯಾಲಯಕ್ಕೆ ದೋಷರೊಪಾಣಾ ಪಟ್ಟಿಯನ್ನು ಸಲ್ಲಿಸಿರುತ್ತಾರೆ.

ಸದ್ರಿ‌ ಪ್ರಕರಣದಲ್ಲಿ ಹೆಚ್ಚುವರಿಯಾಗಿ ಅಳವಡಿಸಲಾದ ಪರಿಶಿಷ್ಟ ಜಾತಿ ಮತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿ, ತನಿಖೆ ನಡೆಸಿದ ಆಗಿನ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅದೀಕ್ಷಕರಾಗಿದ್ದ ರಾಹುಲ್ ಕುಮಾರ್ ಶಹಪುರ್ ಐ.ಪಿ.ಎಸ್ ರವರು ಹೆಚ್ಚುವರಿ ದೋಷಾರೋಪಣಾ ಪಟ್ಟಿಯನ್ನು 2ನೇ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಲಯ ಮಂಗಳೂರಿಗೆ ಸಲ್ಲಿಸಿರುವುದಾಗಿದೆ.‌

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ರವರು ಆ. 28 ರಂದು ಆರೋಪಿ ಬಾಳಪ್ಪ ಎಂ ಕಳ್ಳೊಳ್ಳಿ ಎಂಬಾತನಿಗೆ ಐಪಿಸಿ ಸೆಕ್ಷನ್‌ 302 ರಡಿಯಲ್ಲಿ – ಜೀವಾವಧಿ ಶಿಕ್ಷೆ + ರೂ.15,000/- ದಂಡ (ಪಾವತಿಸದಿದ್ದರೆ 6 ತಿಂಗಳು ಹೆಚ್ಚುವರಿ ಜೈಲು). ಪಿಸಿ ಸೆಕ್ಷನ್‌ 201 ರಡಿಯಲ್ಲಿ– 2 ವರ್ಷಗಳ ಸರಳ ಜೈಲು + ರೂ.5,000/- ದಂಡ (ಪಾವತಿಸದಿದ್ದರೆ 3 ತಿಂಗಳು ಹೆಚ್ಚುವರಿ ಜೈಲು) ವಿಧಿಸಿ ಅದೇಶಿಸಿರುತ್ತದೆ.

ಪ್ರಕರಣದ ವಿಚಾರಣೆಯಲ್ಲಿ ಸರ್ಕಾರಿ ಅಭಿಯೋಜಕರಾಗಿ ಜ್ಯೋತಿ ಪಿ ನಾಯಕ್ ರವರು ವಾದ ಮಂಡಿಸಿರುತಾರೆ. ಪ್ರಕರಣದ ತನಿಖೆಯಲ್ಲಿ ತನಿಖಾ ಸಹಾಯಕರಾಗಿ ಎ.ಎಸ್.ಐ ಕಲೈಮಾರ್ ರವರು ಹಾಗೂ ನ್ಯಾಯಾಲಯ ಸಿಬ್ಬಂದಿಯಾಗಿ ಮಲ್ಲಿಕಾರ್ಜುನ್ (pc2293) ರವರು ಕರ್ತವ್ಯ ನಿರ್ವಹಿಸಿರುತ್ತಾರೆ.

Related posts

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಹಾಗೂ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಆ.17 ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಮೊಸರು ಕುಡಿಕೆ ಉತ್ಸವ, ಪೂರ್ವಾಭಾವಿ ಸಭೆ

Suddi Udaya

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya
error: Content is protected !!