23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಮೂಡಿ ಬರಲಿದೆ ಹೊಸ ಚಲನಚಿತ್ರ “ಪೈಕಾ”

ಬೆಳ್ತಂಗಡಿ: ಚಲನಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿ, ಪ್ರೇಕ್ಷಕರ ಮನದಲ್ಲಿ ಮನೆ ಮಾಡಿ, ದಸ್ಕತ್ ಎಂಬ ಚಲನಚಿತ್ರದ ಮೂಲಕ ಬಹುದೊಡ್ಡ ಯಶಸ್ಸು ಪಡೆದು, ಈಗ ಅದೇ ತಂಡ ಮತ್ತೊಂದು ಹೊಸ ಮೈಲುಗಲ್ಲಿಗೆ ತಲುಪುವ ಹುರುಪಲ್ಲಿದ್ದಾರೆ.

ಇದು ತುಳು, ಕನ್ನಡ, ಹಾಗೂ ಮಲಯಾಳಂ ಭಾಷೆಯಲ್ಲಿ ಸಿದ್ಧವಾಗುತ್ತಿರುವ ಹೊಸ ಚಲನಚಿತ್ರ ಅದುವೇ ಪೈಕಾ.

ಉದಯ್ ಪೂಜಾರಿ ಬಲ್ಲಾಳ್ ಬಾಗ್ ಅರ್ಪಿಸುವ ಪಿ ಎಸ್ ಪ್ರೊಡಕ್ಷನ್ಸ್ ನಿರ್ಮಾಣದ, ನಿರ್ಮಾಪಕ ಲಿಖಿತ್ ಆರ್ ಕೋಟ್ಯಾನ್, ಸಹ ನಿರ್ಮಾಪಕ ಸ್ವಸ್ತಿಕ್ ಆರ್ಯ, ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ನಾಯಕನಾಗಿ ಸ್ವಸ್ತಿಕ ಆರ್ಯ ಬಣ್ಣ ಹಚ್ಚಲಿದ್ದಾರೆ, ಉದಯ್ ಪೂಜಾರಿ ಬಳ್ಳಾಲ್ ಬಾಗ್ ಖಳ ನಾಯಕನ ಪಾತ್ರದಲ್ಲಿ ಮಿಂಚಲಿದ್ದು, ಕರಾವಳಿಯ ಹಲವಾರು ಕಲಾವಿದರ ದಂಡು ಈ ಸಿನೆಮಾದಲ್ಲಿ ಕಾಣಿಸಿಕೊಳ್ಳಲಿದೆ. ಸ್ಮಿತೇಶ್ ಬಾರ್ಯ, ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಛಾಯಾಗ್ರಹಣ ಸಂತೋಷ್ ಆಚಾರ್ಯ, ಸಂಕಲನ ಗಣೇಶ್ ನೀರ್ಚಾಲ್, ಸಂಗೀತ ಸಮರ್ಥನ್ ಎಸ್ ರಾವ್, ಹಾಗೂ ತಂಡದಲ್ಲಿ ಪ್ರಜೇಶ್ ಶೆಟ್ಟಿ, ನಿಶಿತ್ ಶೆಟ್ಟಿ ,ನೀರಜ್ ಕುಂಜರ್ಪ, ದೀಕ್ಷಿತ್ ಕೆ ಅಂಡಿಂಜೆ, ಮನೋಜ್ ಆನಂದ್‌, ದೀಕ್ಷಿತ್ ಧರ್ಮಸ್ಥಳ, ವಿನೋದ್ ರಾಜ್ ಕಲ್ಮಂಜ ಜೊತೆಯಾಗಿದ್ದಾರೆ.

ಈಗಾಗಲೇ ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡ ಈ ತಂಡ, ಪೈಕಾ ಮೂಲಕ ಮನರಂಜನೆಯ ಜೊತೆಗೆ ದೊಡ್ಡ ಯಶಸ್ಸು ಸಾಧಿಸಲಿದ್ದಾರೆ.

Related posts

ಮರೋಡಿ: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಇತಿಹಾಸ ಪ್ರಸಿದ್ಧ ಶಿಶಿಲ ಜಾತ್ರೆಗೆ ಚಾಲನೆ-ಗೊನೆ ಮುಹೂರ್ತ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya
error: Content is protected !!