22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಳ್ತಂಗಡಿ : ದಿನಾಂಕ 01-03-2014 ರಂದು ಬೆಳ್ತಂಗಡಿ ಉಜಿರೆಯಲ್ಲಿರುವ ವಸತಿಗೃಹದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ: 126/2014, ಕಲಂ:302.201 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಪ್ರಕರಣದ ಆರೋಪಿಯಾದ ಚಿಕ್ಕಮಗಳೂರು ನಿವಾಸಿ ಬಾಳಪ್ಪ ಎಂ ಕಳ್ಳೊಳ್ಳಿ ಎಂಬಾತನನ್ನು ಬಂಧಿಸಿ, ವಿಚಾರಣೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರಾದ ಲಿಂಗಪ್ಪ ಪೂಜಾರಿ ರವರು ಸೂಕ್ತ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಬೆಳ್ತಂಗಡಿ cj&jmfc ನ್ಯಾಯಾಲಯಕ್ಕೆ ದೋಷರೊಪಾಣಾ ಪಟ್ಟಿಯನ್ನು ಸಲ್ಲಿಸಿರುತ್ತಾರೆ.

ಸದ್ರಿ‌ ಪ್ರಕರಣದಲ್ಲಿ ಹೆಚ್ಚುವರಿಯಾಗಿ ಅಳವಡಿಸಲಾದ ಪರಿಶಿಷ್ಟ ಜಾತಿ ಮತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿ, ತನಿಖೆ ನಡೆಸಿದ ಆಗಿನ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅದೀಕ್ಷಕರಾಗಿದ್ದ ರಾಹುಲ್ ಕುಮಾರ್ ಶಹಪುರ್ ಐ.ಪಿ.ಎಸ್ ರವರು ಹೆಚ್ಚುವರಿ ದೋಷಾರೋಪಣಾ ಪಟ್ಟಿಯನ್ನು 2ನೇ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಲಯ ಮಂಗಳೂರಿಗೆ ಸಲ್ಲಿಸಿರುವುದಾಗಿದೆ.‌

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ರವರು ಆ. 28 ರಂದು ಆರೋಪಿ ಬಾಳಪ್ಪ ಎಂ ಕಳ್ಳೊಳ್ಳಿ ಎಂಬಾತನಿಗೆ ಐಪಿಸಿ ಸೆಕ್ಷನ್‌ 302 ರಡಿಯಲ್ಲಿ – ಜೀವಾವಧಿ ಶಿಕ್ಷೆ + ರೂ.15,000/- ದಂಡ (ಪಾವತಿಸದಿದ್ದರೆ 6 ತಿಂಗಳು ಹೆಚ್ಚುವರಿ ಜೈಲು). ಪಿಸಿ ಸೆಕ್ಷನ್‌ 201 ರಡಿಯಲ್ಲಿ– 2 ವರ್ಷಗಳ ಸರಳ ಜೈಲು + ರೂ.5,000/- ದಂಡ (ಪಾವತಿಸದಿದ್ದರೆ 3 ತಿಂಗಳು ಹೆಚ್ಚುವರಿ ಜೈಲು) ವಿಧಿಸಿ ಅದೇಶಿಸಿರುತ್ತದೆ.

ಪ್ರಕರಣದ ವಿಚಾರಣೆಯಲ್ಲಿ ಸರ್ಕಾರಿ ಅಭಿಯೋಜಕರಾಗಿ ಜ್ಯೋತಿ ಪಿ ನಾಯಕ್ ರವರು ವಾದ ಮಂಡಿಸಿರುತಾರೆ. ಪ್ರಕರಣದ ತನಿಖೆಯಲ್ಲಿ ತನಿಖಾ ಸಹಾಯಕರಾಗಿ ಎ.ಎಸ್.ಐ ಕಲೈಮಾರ್ ರವರು ಹಾಗೂ ನ್ಯಾಯಾಲಯ ಸಿಬ್ಬಂದಿಯಾಗಿ ಮಲ್ಲಿಕಾರ್ಜುನ್ (pc2293) ರವರು ಕರ್ತವ್ಯ ನಿರ್ವಹಿಸಿರುತ್ತಾರೆ.

Related posts

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

Suddi Udaya

ಕಟ್ಟಡ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವದಿಂದ ಕಾರ್ಮಿಕರಿಗೆ ಕೆಲಸ ಲಭಿಸದಿರುವ ಕುರಿತು ಹಾಗೂ ಹೊರರಾಜ್ಯದ ಕಾರ್ಮಿಕರನ್ನು ನೋಂದಣಿಗೊಳಿಸುವಂತೆ ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರ್, ಹಾಗೂ ಪೊಲೀಸ್ ಠಾಣೆಗೆ ಮನವಿ

Suddi Udaya

ನಾಡಕಚೇರಿಗಳಲ್ಲಿ ಸರ್ವರ್ ಸಮಸ್ಯೆ-ಜನರು ಹೈರಾಣು

Suddi Udaya

‘ಗೀತಗಾಯನ’ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್ ಡಿ ಎಮ್ ಕಾಲೇಜಿನ ವಾರ್ಷಿಕೋತ್ಸವ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆ

Suddi Udaya
error: Content is protected !!