23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಳ್ತಂಗಡಿ : ದಿನಾಂಕ 01-03-2014 ರಂದು ಬೆಳ್ತಂಗಡಿ ಉಜಿರೆಯಲ್ಲಿರುವ ವಸತಿಗೃಹದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ: 126/2014, ಕಲಂ:302.201 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಪ್ರಕರಣದ ಆರೋಪಿಯಾದ ಚಿಕ್ಕಮಗಳೂರು ನಿವಾಸಿ ಬಾಳಪ್ಪ ಎಂ ಕಳ್ಳೊಳ್ಳಿ ಎಂಬಾತನನ್ನು ಬಂಧಿಸಿ, ವಿಚಾರಣೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರಾದ ಲಿಂಗಪ್ಪ ಪೂಜಾರಿ ರವರು ಸೂಕ್ತ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಬೆಳ್ತಂಗಡಿ cj&jmfc ನ್ಯಾಯಾಲಯಕ್ಕೆ ದೋಷರೊಪಾಣಾ ಪಟ್ಟಿಯನ್ನು ಸಲ್ಲಿಸಿರುತ್ತಾರೆ.

ಸದ್ರಿ‌ ಪ್ರಕರಣದಲ್ಲಿ ಹೆಚ್ಚುವರಿಯಾಗಿ ಅಳವಡಿಸಲಾದ ಪರಿಶಿಷ್ಟ ಜಾತಿ ಮತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿ, ತನಿಖೆ ನಡೆಸಿದ ಆಗಿನ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅದೀಕ್ಷಕರಾಗಿದ್ದ ರಾಹುಲ್ ಕುಮಾರ್ ಶಹಪುರ್ ಐ.ಪಿ.ಎಸ್ ರವರು ಹೆಚ್ಚುವರಿ ದೋಷಾರೋಪಣಾ ಪಟ್ಟಿಯನ್ನು 2ನೇ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಲಯ ಮಂಗಳೂರಿಗೆ ಸಲ್ಲಿಸಿರುವುದಾಗಿದೆ.‌

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ರವರು ಆ. 28 ರಂದು ಆರೋಪಿ ಬಾಳಪ್ಪ ಎಂ ಕಳ್ಳೊಳ್ಳಿ ಎಂಬಾತನಿಗೆ ಐಪಿಸಿ ಸೆಕ್ಷನ್‌ 302 ರಡಿಯಲ್ಲಿ – ಜೀವಾವಧಿ ಶಿಕ್ಷೆ + ರೂ.15,000/- ದಂಡ (ಪಾವತಿಸದಿದ್ದರೆ 6 ತಿಂಗಳು ಹೆಚ್ಚುವರಿ ಜೈಲು). ಪಿಸಿ ಸೆಕ್ಷನ್‌ 201 ರಡಿಯಲ್ಲಿ– 2 ವರ್ಷಗಳ ಸರಳ ಜೈಲು + ರೂ.5,000/- ದಂಡ (ಪಾವತಿಸದಿದ್ದರೆ 3 ತಿಂಗಳು ಹೆಚ್ಚುವರಿ ಜೈಲು) ವಿಧಿಸಿ ಅದೇಶಿಸಿರುತ್ತದೆ.

ಪ್ರಕರಣದ ವಿಚಾರಣೆಯಲ್ಲಿ ಸರ್ಕಾರಿ ಅಭಿಯೋಜಕರಾಗಿ ಜ್ಯೋತಿ ಪಿ ನಾಯಕ್ ರವರು ವಾದ ಮಂಡಿಸಿರುತಾರೆ. ಪ್ರಕರಣದ ತನಿಖೆಯಲ್ಲಿ ತನಿಖಾ ಸಹಾಯಕರಾಗಿ ಎ.ಎಸ್.ಐ ಕಲೈಮಾರ್ ರವರು ಹಾಗೂ ನ್ಯಾಯಾಲಯ ಸಿಬ್ಬಂದಿಯಾಗಿ ಮಲ್ಲಿಕಾರ್ಜುನ್ (pc2293) ರವರು ಕರ್ತವ್ಯ ನಿರ್ವಹಿಸಿರುತ್ತಾರೆ.

Related posts

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya

ಧರ್ಮಸ್ಥಳ: ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ – ಭಾರತ ವಿಶ್ವಗುರುವಾಗಬೇಕು : ಎಚ್.ಎನ್. ಚಂದ್ರಶೇಖರ್

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆ

Suddi Udaya

ಡಿ 13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ, ಗುರುವಂದನೆ, 5 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ : ಪತ್ರಿಕಾಗೋಷ್ಠಿಯಲ್ಲಿ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ ಮಾಹಿತಿ

Suddi Udaya

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!