25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಮೂಡಿ ಬರಲಿದೆ ಹೊಸ ಚಲನಚಿತ್ರ “ಪೈಕಾ”

ಬೆಳ್ತಂಗಡಿ: ಚಲನಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿ, ಪ್ರೇಕ್ಷಕರ ಮನದಲ್ಲಿ ಮನೆ ಮಾಡಿ, ದಸ್ಕತ್ ಎಂಬ ಚಲನಚಿತ್ರದ ಮೂಲಕ ಬಹುದೊಡ್ಡ ಯಶಸ್ಸು ಪಡೆದು, ಈಗ ಅದೇ ತಂಡ ಮತ್ತೊಂದು ಹೊಸ ಮೈಲುಗಲ್ಲಿಗೆ ತಲುಪುವ ಹುರುಪಲ್ಲಿದ್ದಾರೆ.

ಇದು ತುಳು, ಕನ್ನಡ, ಹಾಗೂ ಮಲಯಾಳಂ ಭಾಷೆಯಲ್ಲಿ ಸಿದ್ಧವಾಗುತ್ತಿರುವ ಹೊಸ ಚಲನಚಿತ್ರ ಅದುವೇ ಪೈಕಾ.

ಉದಯ್ ಪೂಜಾರಿ ಬಲ್ಲಾಳ್ ಬಾಗ್ ಅರ್ಪಿಸುವ ಪಿ ಎಸ್ ಪ್ರೊಡಕ್ಷನ್ಸ್ ನಿರ್ಮಾಣದ, ನಿರ್ಮಾಪಕ ಲಿಖಿತ್ ಆರ್ ಕೋಟ್ಯಾನ್, ಸಹ ನಿರ್ಮಾಪಕ ಸ್ವಸ್ತಿಕ್ ಆರ್ಯ, ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ನಾಯಕನಾಗಿ ಸ್ವಸ್ತಿಕ ಆರ್ಯ ಬಣ್ಣ ಹಚ್ಚಲಿದ್ದಾರೆ, ಉದಯ್ ಪೂಜಾರಿ ಬಳ್ಳಾಲ್ ಬಾಗ್ ಖಳ ನಾಯಕನ ಪಾತ್ರದಲ್ಲಿ ಮಿಂಚಲಿದ್ದು, ಕರಾವಳಿಯ ಹಲವಾರು ಕಲಾವಿದರ ದಂಡು ಈ ಸಿನೆಮಾದಲ್ಲಿ ಕಾಣಿಸಿಕೊಳ್ಳಲಿದೆ. ಸ್ಮಿತೇಶ್ ಬಾರ್ಯ, ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಛಾಯಾಗ್ರಹಣ ಸಂತೋಷ್ ಆಚಾರ್ಯ, ಸಂಕಲನ ಗಣೇಶ್ ನೀರ್ಚಾಲ್, ಸಂಗೀತ ಸಮರ್ಥನ್ ಎಸ್ ರಾವ್, ಹಾಗೂ ತಂಡದಲ್ಲಿ ಪ್ರಜೇಶ್ ಶೆಟ್ಟಿ, ನಿಶಿತ್ ಶೆಟ್ಟಿ ,ನೀರಜ್ ಕುಂಜರ್ಪ, ದೀಕ್ಷಿತ್ ಕೆ ಅಂಡಿಂಜೆ, ಮನೋಜ್ ಆನಂದ್‌, ದೀಕ್ಷಿತ್ ಧರ್ಮಸ್ಥಳ, ವಿನೋದ್ ರಾಜ್ ಕಲ್ಮಂಜ ಜೊತೆಯಾಗಿದ್ದಾರೆ.

ಈಗಾಗಲೇ ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡ ಈ ತಂಡ, ಪೈಕಾ ಮೂಲಕ ಮನರಂಜನೆಯ ಜೊತೆಗೆ ದೊಡ್ಡ ಯಶಸ್ಸು ಸಾಧಿಸಲಿದ್ದಾರೆ.

Related posts

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರುಗಳ ನಡುವೆ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ

Suddi Udaya

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ಬಂದಾರುನಲ್ಲಿ ಗುಡ್ಡ ಕುಸಿತ : ಮನೆಗೆ ಹಾನಿ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಮುಹಮ್ಮದ್ ಹುಝೈರ್ ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya
error: Content is protected !!