25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

ಬೆಳ್ತಂಗಡಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ವಾಹನಕ್ಕೆ ಡಿಕ್ಕಿ ಹೊಡೆದ ಪ್ರಕರಣ ಸಂಬಂಧ ಮೂವರು ಆರೋಪಿಗಳಾದ ಉಜಿರೆ ನಿವಾಸಿಗಳಾದ ಸೃಜನ್ ಎಲ್, ಹಿತೇಶ್ ಶೆಟ್ಟಿ, ಸಹನ್ ಗೆ ಉಡುಪಿ ನ್ಯಾಯಾಲಯ ಆ.28 ರಂದು ಜಾಮೀನು ಮಂಜೂರು ಮಾಡಿದೆ.

ಪ್ರಕರಣ ವಿವರ: ಆ. 21 ರಂದು ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025 ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತನಾದ ಮಹೇಶ್ ಶೆಟ್ಟಿ ತಿಮರೋಡಿ ರವರನ್ನು ಉಜಿರೆ ನಿವಾಸದಿಂದ ವಶಕ್ಕೆ ಪಡೆದುಕೊಂಡು ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವಾಗ ಅವರ ಬೆಂಬಲಿಗರು ಪೊಲೀಸ್ ವಾಹನಗಳನ್ನು ಹಿಂಬಾಲಿಸಿಕೊಂಡು ಬಂದಿದ್ದು ಎಸ್ಟೇ ಬಾರಿ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಂದು ಕರ್ತವ್ಯಕ್ಕೆ ಅಡ್ಡಿ ಪಡಿಸಬೇಡಿ ಎಂದು ಸೂಚನೆ ನೀಡಿದರು ಪಾಲಿಸದೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ್ಮಾರ್ ಹೆದ್ದಾರಿಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸುವಂತೆ ಬಂದು ಸದ್ರಿ ತಂಡದಲ್ಲಿದ್ದ ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಇಲಾಖಾ ವಾಹನ ನಂಬರ್ KA-20-G-0669 ವಾಹನಕ್ಕೆ KA-70-M-3048 ಬಿಳಿ ಬಣ್ಣದ ಶಿಫ್ಟ್ ಕಾರು ಡಿಕ್ಕಿ ಹೊಡೆದು ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪ್ರಕರಣದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗದಂತೆ ಅಡ್ಡಿಪಡಿಸಿದ್ದರಿಂದ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗನ್ ಮ್ಯಾನ್ ಅ ಕ್ರ 99/2025 0 132, 121(1), 281, 3(5) ಬಿ ಎನ್ ಎಸ್ 2023 ಮತ್ತು ಕಲಂ 3 KPDL Act ರಂತೆ ಆ 21 ರಂದು ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಉಜಿರೆ ನಿವಾಸಿಗಳಾದ ಸೃಜನ್ ಎಲ್, ಹಿತೇಶ್‌ ಶೆಟ್ಟಿ, ಸಹನ್ ಎಂಬವರನ್ನು ಬಂಧಿಸಿ ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಆ.28 ರಂದು ಉಡುಪಿ ಕೋರ್ಟ್ ನಿಂದ ಮೂವರಿಗೂ ಜಾಮೀನು ಮಂಜೂರು ಮಾಡಲಾಗಿದ್ದು ಜೈಲಿನಿಂದ ಬಿಡುಗಡೆ ಮಾಡಿದ್ದಾರೆ.

Related posts

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya

ಧರ್ಮಸ್ಥಳ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ದೊರೆರಾಜು

Suddi Udaya

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya
error: Content is protected !!