September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ

ಶಿಬಾಜೆ: ಇಲ್ಲಿಯ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ನೇತೃತ್ವದಲ್ಲಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಿಬಾಜೆ, ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಪೆರ್ಲ, ಶ್ರೀ ಭುವನೇಶ್ವರಿ ಭಜನಾ ಮಂಡಳಿ ಬೂಡದಮಕ್ಕಿ, ಗ್ರಾಮದ ದೈವಸ್ಥಾನಗಳ ಸಮಿತಿ ಇವರ ಸಹಭಾಗಿತ್ವದಲ್ಲಿ ಶಿಬಾಜೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆಯು ಆ. 29ರಂದು ನಡೆಯಿತು.

ಯಾತ್ರೆಯಲ್ಲಿ ಭವ್ಯವಾದ ರಥದ ಜೊತೆ ಶಿಬಾಜೆ ಗ್ರಾಮದ ಜನತೆಯು ಧರ್ಮಸ್ಥಳದ ಕಡೆ ವಾಹನಗಳ ಮೂಲಕ ಸಾಗಿ ಅಲ್ಲಿಂದ ಧರ್ಮಸ್ಥಳ ದ್ವಾರದಿಂದ ಪಾದಯಾತ್ರೆಯ ಮೂಲಕ ದೇವಸ್ಥಾನ ತಲುಪಿ ಸಮಾವೇಶದಲ್ಲಿ ಭಾಗವಹಿಸಿ, ದೇವರ ದರ್ಶನ ಪಡೆದು ನಂತರ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಮಾಜಿ ಸದಸ್ಯರುಗಳು, ಹಿರಿಯರು, ಮಹಿಳೆಯರು, ಯುವಕರು ಭಾಗವಹಿಸಿದ್ದರು

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ದೊರೆತ ಐಎಸ್‌ಒ 27001 ಮೇಲ್ದರ್ಜೆಗೆ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯ ಭೌತಿಕ ಸೌಲಭ್ಯಕ್ಕೆ ರೋಟರಿ ಕ್ಲಬ್ ಸಿದ್ದಕಟ್ಟೆ ಇವರಿಂದ ಆರ್ಥಿಕ ನೆರವು

Suddi Udaya

ಜೆಸಿಐ ಉಜಿರೆ ಘಟಕದ ಆತಿಥ್ಯದಲ್ಲಿ ಬಹು ಘಟಕ ವ್ಯಕ್ತಿತ್ವ ವಿಕಸನ ಕಾರ್ಯಗಾರ

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya
error: Content is protected !!