25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಳ್ತಂಗಡಿ : ದಿನಾಂಕ 01-03-2014 ರಂದು ಬೆಳ್ತಂಗಡಿ ಉಜಿರೆಯಲ್ಲಿರುವ ವಸತಿಗೃಹದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ: 126/2014, ಕಲಂ:302.201 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಪ್ರಕರಣದ ಆರೋಪಿಯಾದ ಚಿಕ್ಕಮಗಳೂರು ನಿವಾಸಿ ಬಾಳಪ್ಪ ಎಂ ಕಳ್ಳೊಳ್ಳಿ ಎಂಬಾತನನ್ನು ಬಂಧಿಸಿ, ವಿಚಾರಣೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರಾದ ಲಿಂಗಪ್ಪ ಪೂಜಾರಿ ರವರು ಸೂಕ್ತ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಬೆಳ್ತಂಗಡಿ cj&jmfc ನ್ಯಾಯಾಲಯಕ್ಕೆ ದೋಷರೊಪಾಣಾ ಪಟ್ಟಿಯನ್ನು ಸಲ್ಲಿಸಿರುತ್ತಾರೆ.

ಸದ್ರಿ‌ ಪ್ರಕರಣದಲ್ಲಿ ಹೆಚ್ಚುವರಿಯಾಗಿ ಅಳವಡಿಸಲಾದ ಪರಿಶಿಷ್ಟ ಜಾತಿ ಮತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿ, ತನಿಖೆ ನಡೆಸಿದ ಆಗಿನ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅದೀಕ್ಷಕರಾಗಿದ್ದ ರಾಹುಲ್ ಕುಮಾರ್ ಶಹಪುರ್ ಐ.ಪಿ.ಎಸ್ ರವರು ಹೆಚ್ಚುವರಿ ದೋಷಾರೋಪಣಾ ಪಟ್ಟಿಯನ್ನು 2ನೇ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಲಯ ಮಂಗಳೂರಿಗೆ ಸಲ್ಲಿಸಿರುವುದಾಗಿದೆ.‌

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ರವರು ಆ. 28 ರಂದು ಆರೋಪಿ ಬಾಳಪ್ಪ ಎಂ ಕಳ್ಳೊಳ್ಳಿ ಎಂಬಾತನಿಗೆ ಐಪಿಸಿ ಸೆಕ್ಷನ್‌ 302 ರಡಿಯಲ್ಲಿ – ಜೀವಾವಧಿ ಶಿಕ್ಷೆ + ರೂ.15,000/- ದಂಡ (ಪಾವತಿಸದಿದ್ದರೆ 6 ತಿಂಗಳು ಹೆಚ್ಚುವರಿ ಜೈಲು). ಪಿಸಿ ಸೆಕ್ಷನ್‌ 201 ರಡಿಯಲ್ಲಿ– 2 ವರ್ಷಗಳ ಸರಳ ಜೈಲು + ರೂ.5,000/- ದಂಡ (ಪಾವತಿಸದಿದ್ದರೆ 3 ತಿಂಗಳು ಹೆಚ್ಚುವರಿ ಜೈಲು) ವಿಧಿಸಿ ಅದೇಶಿಸಿರುತ್ತದೆ.

ಪ್ರಕರಣದ ವಿಚಾರಣೆಯಲ್ಲಿ ಸರ್ಕಾರಿ ಅಭಿಯೋಜಕರಾಗಿ ಜ್ಯೋತಿ ಪಿ ನಾಯಕ್ ರವರು ವಾದ ಮಂಡಿಸಿರುತಾರೆ. ಪ್ರಕರಣದ ತನಿಖೆಯಲ್ಲಿ ತನಿಖಾ ಸಹಾಯಕರಾಗಿ ಎ.ಎಸ್.ಐ ಕಲೈಮಾರ್ ರವರು ಹಾಗೂ ನ್ಯಾಯಾಲಯ ಸಿಬ್ಬಂದಿಯಾಗಿ ಮಲ್ಲಿಕಾರ್ಜುನ್ (pc2293) ರವರು ಕರ್ತವ್ಯ ನಿರ್ವಹಿಸಿರುತ್ತಾರೆ.

Related posts

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya

ನಾವರ ನಿವಾಸಿ ಸುಂದರಿ ನಿಧನ

Suddi Udaya

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಯಕ್ಷಗಾನದ ನೂತನ ರಂಗಸ್ಥಳದ ಚೌಕಟ್ಟು ಉದ್ಘಾಟನೆ

Suddi Udaya

ಜ. 19: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಕುಲದೈವೋ ಬ್ರಹ್ಮ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆ: ಬಿರುಸಿನ ಮತದಾನ

Suddi Udaya
error: Content is protected !!