September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಳ್ತಂಗಡಿ : ದಿನಾಂಕ 01-03-2014 ರಂದು ಬೆಳ್ತಂಗಡಿ ಉಜಿರೆಯಲ್ಲಿರುವ ವಸತಿಗೃಹದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ: 126/2014, ಕಲಂ:302.201 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಪ್ರಕರಣದ ಆರೋಪಿಯಾದ ಚಿಕ್ಕಮಗಳೂರು ನಿವಾಸಿ ಬಾಳಪ್ಪ ಎಂ ಕಳ್ಳೊಳ್ಳಿ ಎಂಬಾತನನ್ನು ಬಂಧಿಸಿ, ವಿಚಾರಣೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರಾದ ಲಿಂಗಪ್ಪ ಪೂಜಾರಿ ರವರು ಸೂಕ್ತ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಬೆಳ್ತಂಗಡಿ cj&jmfc ನ್ಯಾಯಾಲಯಕ್ಕೆ ದೋಷರೊಪಾಣಾ ಪಟ್ಟಿಯನ್ನು ಸಲ್ಲಿಸಿರುತ್ತಾರೆ.

ಸದ್ರಿ‌ ಪ್ರಕರಣದಲ್ಲಿ ಹೆಚ್ಚುವರಿಯಾಗಿ ಅಳವಡಿಸಲಾದ ಪರಿಶಿಷ್ಟ ಜಾತಿ ಮತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿ, ತನಿಖೆ ನಡೆಸಿದ ಆಗಿನ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅದೀಕ್ಷಕರಾಗಿದ್ದ ರಾಹುಲ್ ಕುಮಾರ್ ಶಹಪುರ್ ಐ.ಪಿ.ಎಸ್ ರವರು ಹೆಚ್ಚುವರಿ ದೋಷಾರೋಪಣಾ ಪಟ್ಟಿಯನ್ನು 2ನೇ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಲಯ ಮಂಗಳೂರಿಗೆ ಸಲ್ಲಿಸಿರುವುದಾಗಿದೆ.‌

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ರವರು ಆ. 28 ರಂದು ಆರೋಪಿ ಬಾಳಪ್ಪ ಎಂ ಕಳ್ಳೊಳ್ಳಿ ಎಂಬಾತನಿಗೆ ಐಪಿಸಿ ಸೆಕ್ಷನ್‌ 302 ರಡಿಯಲ್ಲಿ – ಜೀವಾವಧಿ ಶಿಕ್ಷೆ + ರೂ.15,000/- ದಂಡ (ಪಾವತಿಸದಿದ್ದರೆ 6 ತಿಂಗಳು ಹೆಚ್ಚುವರಿ ಜೈಲು). ಪಿಸಿ ಸೆಕ್ಷನ್‌ 201 ರಡಿಯಲ್ಲಿ– 2 ವರ್ಷಗಳ ಸರಳ ಜೈಲು + ರೂ.5,000/- ದಂಡ (ಪಾವತಿಸದಿದ್ದರೆ 3 ತಿಂಗಳು ಹೆಚ್ಚುವರಿ ಜೈಲು) ವಿಧಿಸಿ ಅದೇಶಿಸಿರುತ್ತದೆ.

ಪ್ರಕರಣದ ವಿಚಾರಣೆಯಲ್ಲಿ ಸರ್ಕಾರಿ ಅಭಿಯೋಜಕರಾಗಿ ಜ್ಯೋತಿ ಪಿ ನಾಯಕ್ ರವರು ವಾದ ಮಂಡಿಸಿರುತಾರೆ. ಪ್ರಕರಣದ ತನಿಖೆಯಲ್ಲಿ ತನಿಖಾ ಸಹಾಯಕರಾಗಿ ಎ.ಎಸ್.ಐ ಕಲೈಮಾರ್ ರವರು ಹಾಗೂ ನ್ಯಾಯಾಲಯ ಸಿಬ್ಬಂದಿಯಾಗಿ ಮಲ್ಲಿಕಾರ್ಜುನ್ (pc2293) ರವರು ಕರ್ತವ್ಯ ನಿರ್ವಹಿಸಿರುತ್ತಾರೆ.

Related posts

ಎಸ್ಐಟಿ ಸಲ್ಲಿಸಿದ ವರದಿಯ ಪ್ರತಿ ನೀಡಲು ಅರ್ಜಿ ಸಲ್ಲಿಕೆ: ಕೆಲವೊಂದು ವರದಿಯ ಪ್ರತಿ ನೀಡಲು ಕೋರ್ಟ್ ಒಪ್ಪಿಗೆ

Suddi Udaya

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya

ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ: ಬೆಳ್ತಂಗಡಿಯಲ್ಲಿ ಕಾಲ್ನಡಿಗೆ ಜಾಥಾ

Suddi Udaya

ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ: ಎಸ್ಡಿಪಿಐ ಮುಖಂಡರಿಂದ ಸಮಸ್ಯೆ ಬಗೆಹರಿಸಲು ಮನವಿ

Suddi Udaya
error: Content is protected !!