July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ “ನಮ್ಮ ನಡೆ ಧರ್ಮಸ್ಥಳದ ಕಡೆ” ಅಭಿಯಾನ: 14 ಜೈನ ಮಠಗಳ ಭಟ್ಟಾರಕ ಸ್ವಾಮೀಜಿಗಳು ಹಾಗೂ 10 ಸಾವಿರ ಸಂಖ್ಯೆಯಲ್ಲಿ ಜೈನ ಬಾಂಧವರು ಭಾಗಿ

ಬೆಳ್ತಂಗಡಿ: ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ ನಾಡಿನ ಸಮಸ್ತ ಜೈನ ಮಠಗಳ ಭಟ್ಟಾರಕ ಮಹಾಸ್ವಾಮೀಜಿಯವರ ಪಾವನ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೆಂಬಲ ಸೂಚಿಸಲು ಜೈನ ಬಾಂಧವರಿಂದ ‘ನಮ್ಮ ನಡೆ ಧರ್ಮಸ್ಥಳದ ಕಡೆ’ ಎಂಬ ಅಭಿಯಾನ ಆ.29ರಂದು ನಡೆಯಿತು .

ಬೆಳಗ್ಗೆ 10ಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಮಹಾದ್ವಾರದ ಬಳಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯದ ತನಕ ಭವ್ಯವಾದ ಮೆರವಣಿಗೆ ನಡೆಯಿತು.


ರಾಜ್ಯದಾದ್ಯಂತದಿಂದ 14 ಜೈನ ಮಠಗಳ ಪೂಜ್ಯಶ್ರೀಗಳವರ ಮಾರ್ಗದರ್ಶನದಂತೆ ಶ್ರೀಕ್ಷೇತ್ರ ಧರ್ಮಸ್ಥಳದ ಹಾಗೂ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಬೆಂಬಲ ಸೂಚಿಸಲಾಯಿತು. ಬೆಂಗಳೂರು ಸೇರಿದಂತೆ, ಎಲ್ಲ ಜಿಲ್ಲೆಗಳಿಂದ ಸುಮಾರು 10 ಸಾವಿರಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಜೈನ ಬಾಂಧವರು ಸಕ್ರಿಯವಾಗಿ ಪಾಲ್ಗೊಂಡರು.

Related posts

ಪಂಚಾಯಿತಿ ಪಂಪ್ ಶೆಡ್ ಗೆ ಕಿಡಿಗೇಡಿಗಳಿಂದ ಹಾನಿ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ಸಭೆ

Suddi Udaya

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya
error: Content is protected !!