25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಮ್ಮ ಮನೆ ಶಾಖೆಯ ವಾರ್ಷಿಕೋತ್ಸವ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಳ್ತಂಗಡಿ ತಾಲೂಕಿನ ಮೊದಲ ಯೋಗ ತರಗತಿ; ‘ನಮ್ಮ ಮನೆ’ ಶಾಖೆ ಗುರುವಾಯನಕೆರೆ ಇದರ ಮೊದಲನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ನಮ್ಮ ಮನೆ ಹವ್ಯಕ ಭವನ ಗುರುವಾಯನಕೆರೆ ಇಲ್ಲಿ, ಆ.೨೪ ರಂದು ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಖೆಯ ಸಂಚಾಲಕಿ ಸುಮಲತಾರವರು ವಹಿಸಿದರು.
ಮುಖ್ಯ ಅತಿಥಿಗಳಾಗಿ ನಮ್ಮ ಮನೆ, ಹವ್ಯಕ ಭವನ ಅಧ್ಯಕ್ಷ ಪರಮೇಶ್ವರ ಭಟ್ ಶುಭ ಹಾರೈಸಿದರು. ನಿಕಟಪೂರ್ವ ಅಧ್ಯಕ್ಷ ಕೃಷ್ಣ ಭಟ್ ಕಾಂತಜೆ, ಅವರು ಶಾಖೆಯಲ್ಲಿ ನಿರಂತರ ಯೋಗ ನಡೆಸುತ್ತಾ ಇರುವ ಕಾರ್ಯವನ್ನು ಶ್ಲಾಘಿಸಿದರು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಮಂಗಳೂರು ಮಹಾನಗರ ಪ್ರಮುಖರು ಗೀತಾ ಪ್ರಾಸ್ತಾವಿಕ ನುಡಿಗಳನ್ನು ನುಡಿದರು.
ಶಾಖೆಯ ಯೋಗಬಂಧುವಾದ ಶ್ರೀಮತಿ ಜಯಂತಿ ಮಾತನಾಡುತ್ತ ನಿರಂತರವಾಗಿ ಶಿಕ್ಷಕರಾಗಿ ಯೋಗ ಶಿಕ್ಷಣ ನೀಡುತ್ತಿರುವ ಶಿಕ್ಷಕರ ನಿಸ್ವಾರ್ಥ ಮನೋಭಾವವನ್ನು ಸ್ಮರಿಸುತ್ತಾ ಸದ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಗುರು-ಶಿಷ್ಯ ಸಂಬAಧದ ಬಗ್ಗೆ ಮಾತನಾಡಿದರು. ಸಂತೋಷ್ ಕುಮಾರ್, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಇದರ ಉಪ್ಪಿನಂಗಡಿ ನಗರ ಸಂಚಾಲಕರು ಇವರು ಮಾರ್ಗದರ್ಶನ ನೀಡುತ್ತಾ ಸಮಿತಿಯಿಂದ ಪಡೆದ ಸಂಸ್ಕಾರ ಮರೆಯದೆ ಹೇಗೆ ನಾವು ವಿನಯವಂತರಾಗಿ ನಡೆದುಕೊಳ್ಳಬೇಕೆಂಬ ಸೂಚನೆ ನೀಡಿದರು.
ಯೋಗಬಂಧುಗಳು ಹಾಗೂ ಯೋಗೇತರ ಬಂಧುಗಳಿಗಾಗಿ ಚಟುವಟಿಕೆಯುಕ್ತ ಆಟಗಳನ್ನು ಶಾಖೆಯ ಯೋಗ ಬಂಧುಗಳಾದ ಪ್ರೀತೇಶ್ ಹಾಗೂ ನಿತೇಶ್ ನಡೆಸಿಕೊಟ್ಟರು.


ಶಾಖೆಯ ಯೋಗ ಬಂಧುವಾದ ಶ್ರೀಮತಿ ಜಯಮಣಿ ಸ್ವಾಗತಿಸಿ, ಶಾಖಾ ಯೋಗ ಬಂಧುವಾದ ಗಿರೀಶ್ ವಾರ್ಷಿಕ ವರದಿಯನ್ನು ಮಂಡಿಸಿದರು, ಯೋಗ ಬಂಧುಗಳಾದ ವಿಜಯ್, ಸುಚಿತ್ರ, ವಿನಯ್, ಜಯಂತಿ ಹಾಗೂ ಪುರಂದರ ಇವರು ಅನಿಸಿಕೆಯನ್ನು ಹಂಚಿಕೊಂಡರು. ಶಾಖಾ ಶಿಕ್ಷಕರಾದ ದಯಾನಂದ ಪ್ರಾರ್ಥಿಸಿ, ಯೋಗಬಂಧು ಪ್ರಿಯ ವಂದಿಸಿದರು. ಶಿವಕುಮಾರ್ ಹಾಗೂ ಭಾರತಿ ನಿರೂಪಿಸಿದರು.
ಶಾಖೆಯ ಹಾಗೂ ನಗರದ ಇತರ ಶಾಖೆಗಳ ಯೋಗಬಂಧುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು. ಶಾಖಾ ಯೋಗ ಬಂಧುಗಳಾದ ಗಿರೀಶ್ ಹಾಗೂ ದಮಯಂತಿಯವರ ನಿರೂಪಣೆಯಲ್ಲಿ ನೃತ್ಯ, ನಾಟಕ ಹಾಗೂ ಇತರ ಮನರಂಜನಾ ಕಾರ್ಯಕ್ರಮಗಳು ಮೂಡಿ ಬಂತು.
ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ಹಾಗೂ ಮಂಗಳೂರು ಭಾಗದ ೮೮ ಯೋಗ ಬಂಧುಗಳು ಹಾಗೂ ೪೫ ಯೋಗೇತರ ಬಂಧುಗಳು ಸೇರಿ 133 ಮಂದಿ ಭಾಗವಹಿಸಿದ್ದರು.

Related posts

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೆ ಪದವಿ ಪ್ರದಾನ ಕಾರ್ಯಕ್ರಮ ಮತ್ತು ಮಾತಾ-ಪಿತಾಮಹರ (ಹಿರಿಯರ) ದಿನ ಆಚರಣೆ.

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya
error: Content is protected !!