July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ. 31: ತಾಲೂಕು ಜೈನ ಸಮಾಜದವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ವಾಹನ ಜಾಥಾ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೆಳ್ತಂಗಡಿ ತಾಲೂಕಿನ 81 ಗ್ರಾಮಗಳಿಂದ ಸಮಸ್ತ ಜೈನ ಧರ್ಮೀಯ ಶ್ರಾವಕ ಶ್ರಾವಿಕೆಯರು ವಾಹನದ ಮೂಲಕ ಜಾಥಾವನ್ನು ಆ.31ರಂದು ಹಮ್ಮಿಕೊಂಡಿರುತ್ತಾರೆ.

ಈ ಜಾಥಾದಲ್ಲಿ ತಾಲೂಕಿನ ಮೂಲೆ ಮೂಲೆಗಳಿಂದ ಎಲ್ಲ ಶ್ರಾವಕರು ಪಾಲ್ಗೊಳ್ಳಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದೊಂದಿಗೆ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆಯವ ರೊಂದಿಗೆ ನಾವಿದ್ದೇವೆ. ಹಾಗೂ ಪುಣ್ಯ ಕ್ಷೇತ್ರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆ ಎಂದು ಸಂದೇಶ ಸಾರುವ ಮೂಲ ಉದ್ದೇಶದೊಂದಿಗೆ ಈ ವಾಹನ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.

ಸದ್ರಿ ಜಾಥಾವು ಬೆಳ್ತಂಗಡಿಯ ಇತಿಹಾಸ ಪ್ರಸಿದ್ದ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿಯಿಂದ ಬೆಳಗ್ಗೆ 8:30 ಕ್ಕೆ 3 ಬಸದಿಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ ವಾಹನ ಜಾಥಾ ಆರಂಭಗೊಳ್ಳಲಿದೆ. ವಿಶ್ವದ ಎಲ್ಲಾ ಕಡೆ ಶಾಂತಿ ನೆಲೆಸಿ ಪ್ರತಿಯೊಬ್ಬರ ಬದುಕು ಸುಂದರವಾಗಿರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿ ಜಾಥಾ ಮುನ್ನಡೆಯಲಿದೆ. ವಿಶೇಷವಾಗಿ ಈ ಜಾಥಾದಲ್ಲಿ ಸಂಘಟಕರು ಯಾರೆಂದರೆ ಪ್ರತಿಯೊಬ್ಬ ಶ್ರಾವಕ ಮತ್ತು ಶ್ರಾವಕಿಯರು ಈ ರೀತಿಯ ಹೊಸ ಯೋಚನೆ ಮತ್ತು ಯೋಜನೆಯೊಂದಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರಾವಕ -ಶ್ರಾವಿಕಯರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

Related posts

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

Suddi Udaya

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!