July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಕಳೆಂಜ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 30 ರಂದು ನಡೆದ ಕಳೆಂಜ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಉಮಾಮಹೇಶ್ವರ ದೇವಸ್ಥಾನದ ಶಿವಪಾರ್ವತಿ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪಕ್ಷದ ಹಿರಿಯ ಕಾರ್ಯಕರ್ತರಾದ ಕೃಷ್ಣಪ್ಪ ಎಂ.ಕೆ.ನಿಡ್ಡಾಜೆ, ಆನಂದ ಗೌಡ ಮರಕ್ಕಡ, ವಾಸಪ್ಪ ಗೌಡ ನಾಯೆರ್ಮಾರ್, ಚೋಮ ಪರಪ್ಪು ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಿಡ್ಲೆ ಕೃಷಿ ಪತ್ತಿನ ಸೇವಾ ಸಹಕಾರಿ ಬ್ಯಾಂಕ್ ನ ಮಾಜಿ ನಿರ್ದೇಶಕರಾದ ರಮೇಶ್ ರಾವ್ ಕಾಯಡ ಉದ್ಘಾಟನಾ ಭಾಷಣ ಮಾಡಿದರು. ಕಣಿಯೂರು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಯುವ ವಕೀಲರಾದ ಯತೀಶ್ ಪಣೆಕ್ಕರ, ಗೋಪಾಲ ಕೃಷ್ಣ ಮಡoತ್ಯಾರು, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸೀತಾರಾಮ ಬೆಳಾಲು, ರವರು ಬೈಠಕ್ ನೀಡಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಸಮಾರೋಪ ಭಾಷಣ ಮಾಡಿ, ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ. ಕೆ, ಅಭ್ಯಾಸ ವರ್ಗದ ಸಂಚಾಲಕರಾದ ಕೊರಗಪ್ಪ ಗೌಡ ಚಾರ್ಮಾಡಿ, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಕಳೆಂಜ, ಪಂಚಾಯತ್ ಉಪಾಧ್ಯಕ್ಷ ಮಂಜುನಾಥ್ ಹಾರಿತ್ತಕಜೆ, ಕಳೆಂಜ ಪಂಚಾಯತ್ ಸದಸ್ಯರುಗಳು, ಬೂತ್ ಅಧ್ಯಕ್ಷರುಗಳು, ಪದಾಧಿಕಾರಿಗಳು, ಹಾಗು ಅನನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಫಲಿತಾಂಶ : ವಾಣಿ ಪ.ಪೂ. ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ವಿಭಾ ಕೆ.ಆರ್ ರಾಜ್ಯಕ್ಕೆ 6ನೇ ಸ್ಥಾನ

Suddi Udaya

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

Suddi Udaya

ಧರ್ಮಸ್ಥಳ :ನಡುಗುಡ್ಡೆ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಪ್ರಯುಕ್ತ 10ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

Suddi Udaya

ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಚಂದ್ರಾವತಿ ಆಚಾರ್ಯ ನಿಧನ

Suddi Udaya
error: Content is protected !!