23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

ನಿಡ್ಲೆ: ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.29 ರಂದು ಬರೆಂಗಾಯ ಕಲ್ಕುಡಗುಡ್ಡೆ ನಾಗವೇಣಿ ಅಮ್ಮ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಂದರ ಗೌಡ ಕಜೆ ವಹಿಸಿ ಮಾತನಾಡಿ ಸದಸ್ಯರಿಗೆ ಶೇ. 7ಡಿವಿಡೆಂಟ್ ಹಾಗೂ ಶೇ. 65 ರಷ್ಟು ಬೋನಸ್ ನೀಡುವುದಾಗಿ ತಿಳಿಸಿದರು.

ದ.ಕ. ಹಾಲು ಒಕ್ಕೂಟ ಪಶು ವೈದ್ಯಾಧಿಕಾರಿ ಡಾ। ಗಣಪತಿ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಉಪ ವ್ಯವಸ್ಥಾಪಕ ಡಾ| ಸತೀಶ್ ರಾವ್ , ದ.ಕ. ಹಾಲು ಒಕ್ಕೂಟ ವಿಸ್ತರಣಾಧಿಕಾರಿ ಸಂದೀಪ್ ಜೈನ್ ಉಪಸ್ಥಿತರಿದ್ದರು.

ಈ ವೇಳೆ ಸ್ಥಳ ದಾನಿಗಳಾದ ಹೊನ್ನಪ್ಪ ಗೌಡ ಮೆರ್ಲ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಿರ್ದೇಶಕರಾದ ನಿರಂಜನ್, ಚೆನ್ನಪ್ಪ ದೇವಾಡಿಗ , ಮುಕುಂದ ದೇವದಾರ್ , ಶಿವಪ್ರಸಾದ್ , ಹೇಮಂತ ಗೌಡ , ಅಣ್ಣು ಗೌಡ , ಶ್ರೀಮತಿ ಶಶಿಕಲಾ , ಶ್ರೀಮತಿ ಗೀತಾ ಎಂ.ಕೆ, ಶ್ರೀಮತಿ ಸುಮನ, ಹಾಲು ಪರೀಕ್ಷಕ ಶೇಖರ ಗೌಡ, ಸಹಾಯಕಿ ಪರಮೇಶ್ವರಿ , ಕೃ.ಗ ಕಾರ್ಯಕರ್ತೆ ಶಶಿಕಲಾ ಉಪಸ್ಥಿತರಿದ್ದರು.

ಉಪಾಧ್ಯಕ್ಷೆ ಗಾಯತ್ರಿ ಹೆಚ್. ಗೌಡ ಪ್ರಾರ್ಥಿಸಿ, ನಿರ್ದೇಶಕ ರುಕ್ಮಯ್ಯ ಪೂಜಾರಿ ಸ್ವಾಗತಿಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಶಾಜಿ ತೋಮಸ್ ವರದಿ ವಾಚಿಸಿ, ವಂದಿಸಿದರು.

Related posts

ಬಡಗಕಜೆಕಾರು: ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ನಿಧನ

Suddi Udaya

ಕೊಲ್ಲಿ: ಶ್ರೀ ದುರ್ಗಾ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿಯ ವಿವಿಧ ಸಂಘಟನೆಗಳಿಂದ ಗೌರವ ಅರ್ಪಣೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ

Suddi Udaya
error: Content is protected !!