July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ, ತೆಕ್ಕಾರು, ಪುತ್ತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಬಾರ್ಯ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 29 ರಂದು ನಡೆದ ಬಾರ್ಯ, ತೆಕ್ಕಾರು, ಪುತ್ತಿಲ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಬಾರ್ಯ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಗೋಪಾಲಕೃಷ್ಣ ಅಯ್ಯರ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಜಿಲ್ಲಾ ಮಹಿಳಾ ಮೋರ್ಚಾ ಸದಸ್ಯರಾದ ಶ್ರೀಮತಿ ಅನಿತಾ ಕುಶಾಲಪ್ಪ ಗೌಡ ಉದ್ಘಾಟನಾ ಭಾಷಣ ಮಾಡಿದರು. ಪಕ್ಷದ ಪ್ರಮುಖರಾದ ರಾಜೇಶ್ ಪೆರ್ಮುಡ, ಗೋಪಾಲಕೃಷ್ಣ , ಜೋಯಲ್ ಮೆಂಡೋನ್ಸ ರವರು ಬೈಠಕ್ ನೀಡಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಸಮಾರೋಪ ಭಾಷಣ ಮಾಡಿ, ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಬಾರ್ಯ ಕೃಷಿ ಪತ್ತಿನ ಅಧ್ಯಕ್ಷ ಪ್ರವೀಣ್ ರೈ , ತಣ್ಣೀರುಪಂಥ ಕೃಷಿ ಪತ್ತಿನ ಅಧ್ಯಕ್ಷ ಜಯಾನಂದ ಕಲ್ಲಾಪು, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆಂಕ್ಯಾರ್,ಶಕ್ತಿ ಕೇಂದ್ರ ಅಧ್ಯಕ್ಷರಾದ ನವೀನ್ ರೈ, ರಾಜೇಶ್ ರೈ, ಪ್ರವೀಣ್ ಬೇಂಗಿಲ , ಪ್ರಶಾಂತ್ ಪೈ, ಬಾರ್ಯ ಕೃಷಿ ಪತ್ತಿನ ನಿರ್ದೇಶಕರು, ಪಂಚಾಯತ್ ಸದಸ್ಯರು ಹಾಗೂ ಅನನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಸಿರೋ ಮಲಬಾರ್ ಮಾತೃವೇದಿ ವತಿಯಿಂದ ಪಡಂಗಡಿ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರಕ್ಕೆ ಸಹಾಯಧನ ವಿತರಣೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya

ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕೃಷ್ಣಪ್ಪರಿಗೆ ಬೀಳ್ಕೊಡುಗೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya
error: Content is protected !!