ನಾರಾವಿ :2024-25ನೇ ಸಾಲಿನಲ್ಲಿ ಸಂಘದ ಸದಸ್ಯರು ಶೇ.100ಸಾಲ ಮರುಪಾವತಿ ಮಾಡಿದ ಬಗ್ಗೆ ದ ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವನ್ನು ಗೌರವಿಸಲಾಯಿತು.
ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಎಮ್.ಎನ್ ರಾಜೇಂದ್ರ ಕುಮಾರ್ ಅವರು ನಾರಾವಿ ಸಹಕಾರಿ ಸಂಘದ ಅಧ್ಯಕ್ಷ ಎನ್ ಸುಧಾಕರ ಭಂಡಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್ ಅವರಿಗೆ ಸಾಧನ ಪ್ರಶಸ್ತಿ ನೀಡಿ ಗೌರವಿಸಿದರು.











