ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ಬೆಳ್ತಂಗಡಿ ಶಾಖೆ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭವು ಆ.30ರಂದು ಬೆಳ್ತಂಗಡಿ ಸಂತೆಕಟ್ಟೆ ಶಾಖೆಯಲ್ಲಿ ಜರುಗಿತು.
ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನಿರ್ದೇಶಕ ಧರಣೇ0ದ್ರ ಜೈನ್ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್ ಹೆಚ್.ಕೆ. ಭಾಗವಹಿಸಿ ನಿವೃತ್ತ ಶಿಕ್ಷಕರ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.
ವೇದಿಕೆಯಲ್ಲಿ ನಿವೃತ್ತ ಶಿಕ್ಷಕರಾದ ಶಿವಶಂಕರ್ ಭಟ್, ರೇವತಿ, ಲಿಲ್ಲಿ, ಸರೋಜಿನಿ ರವರುಗಳು ಉಪಸ್ಥಿತರಿದ್ದು ಗೌರವ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಜಗನ್ನಾಥ್, ಸೀತಾರಾಮ್, ಛಾಯಾಗ್ರಾಹಕ ಸುರೇಶ್ ಕೌಡಂಗೆ ಇನ್ನಿತರರು ಉಪಸ್ಥಿತರಿದ್ದರು.
ಶಾಖಾ ಪ್ರಬಂಧ ಚೇತನ್ ಸ್ವಾಗತಿಸಿದರು. ಸಿಬ್ಬಂದಿಗಳಾದ ಸನ್ಮಾನಿತರನ್ನು ಪರಿಚಯಿಸಿದರು, ಸಂಧ್ಯಾ ಪ್ರಾರ್ಥಿಸಿ, ಸ್ವಾತಿ ವಂದಿಸಿದರು.











