23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ. 31: ತಾಲೂಕು ಜೈನ ಸಮಾಜದವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ವಾಹನ ಜಾಥಾ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೆಳ್ತಂಗಡಿ ತಾಲೂಕಿನ 81 ಗ್ರಾಮಗಳಿಂದ ಸಮಸ್ತ ಜೈನ ಧರ್ಮೀಯ ಶ್ರಾವಕ ಶ್ರಾವಿಕೆಯರು ವಾಹನದ ಮೂಲಕ ಜಾಥಾವನ್ನು ಆ.31ರಂದು ಹಮ್ಮಿಕೊಂಡಿರುತ್ತಾರೆ.

ಈ ಜಾಥಾದಲ್ಲಿ ತಾಲೂಕಿನ ಮೂಲೆ ಮೂಲೆಗಳಿಂದ ಎಲ್ಲ ಶ್ರಾವಕರು ಪಾಲ್ಗೊಳ್ಳಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದೊಂದಿಗೆ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆಯವ ರೊಂದಿಗೆ ನಾವಿದ್ದೇವೆ. ಹಾಗೂ ಪುಣ್ಯ ಕ್ಷೇತ್ರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆ ಎಂದು ಸಂದೇಶ ಸಾರುವ ಮೂಲ ಉದ್ದೇಶದೊಂದಿಗೆ ಈ ವಾಹನ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.

ಸದ್ರಿ ಜಾಥಾವು ಬೆಳ್ತಂಗಡಿಯ ಇತಿಹಾಸ ಪ್ರಸಿದ್ದ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿಯಿಂದ ಬೆಳಗ್ಗೆ 8:30 ಕ್ಕೆ 3 ಬಸದಿಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ ವಾಹನ ಜಾಥಾ ಆರಂಭಗೊಳ್ಳಲಿದೆ. ವಿಶ್ವದ ಎಲ್ಲಾ ಕಡೆ ಶಾಂತಿ ನೆಲೆಸಿ ಪ್ರತಿಯೊಬ್ಬರ ಬದುಕು ಸುಂದರವಾಗಿರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿ ಜಾಥಾ ಮುನ್ನಡೆಯಲಿದೆ. ವಿಶೇಷವಾಗಿ ಈ ಜಾಥಾದಲ್ಲಿ ಸಂಘಟಕರು ಯಾರೆಂದರೆ ಪ್ರತಿಯೊಬ್ಬ ಶ್ರಾವಕ ಮತ್ತು ಶ್ರಾವಕಿಯರು ಈ ರೀತಿಯ ಹೊಸ ಯೋಚನೆ ಮತ್ತು ಯೋಜನೆಯೊಂದಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರಾವಕ -ಶ್ರಾವಿಕಯರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

Related posts

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

Suddi Udaya

ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ

Suddi Udaya

ಬೆಳ್ತಂಗಡಿ ಜೆಸಿಐ ವತಿಯಿಂದ ಎಕ್ಸೆಲ್ ಕಾಲೇಜಿನ ಚೇರ್ಮನ್ ಸುಮಂತ್ ಕುಮಾರ್ ಜೈನ್ ರಿಗೆ ಅಭಿನಂದನೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!